ಪಾಟ್ನಾ: ಮಧುಬನಿ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ನವದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ನ ಮೂರು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ.
ಪೂರ್ವ ರೈಲ್ವೆಯ ಸಿಆರ್ಪಿಎಫ್ ಪ್ರಕಾರ, ಬೋಗಿಗಳುಖಾಲಿ ಇದ್ದುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಬೆಳಗ್ಗೆ 9.13ರ ಸುಮಾರಿಗೆ ರೈಲಿನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ವಲ್ಪ ಸಮಯದಲ್ಲೇ ಮೂರನೇ ಬೋಗಿಗೂ ಹರಡಿದೆ.
‘ನಾವು ಕೂಡಲೇ ಕಾರ್ಯಾಚರಣೆ ಕೈಗೊಂಡು ಜಿಲ್ಲಾ ಅಗ್ನಿಶಾಮಕ ಸಿಬ್ಬಂದಿ ಜೊತೆ ಬೆಳಗ್ಗೆ 9.50 ರ ಸುಮಾರಿಗೆ ಬೆಂಕಿ ನಂದಿಸಿದೆವು. ಘಟನೆ ನಡೆದಾಗ ರೈಲು ಖಾಲಿಯಾಗಿತ್ತು. ಹಾಗಾಗಿ, ಯಾವುದೇ ಸಾವು ನೋವು ಸಂಭವಿಸಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಸ್ಡಿಒ ಅಶ್ವನಿ ಕುಮಾರ್, ಎಸ್ಡಿಪಿಒ ರಾಜೀವ್ ಕುಮಾರ್ ಮತ್ತು ನಗರ ಪೊಲೀಸ್ ಠಾಣೆಯ ಅಮಿತ್ ಕುಮಾರ್ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಘಟನೆ ಕುರಿತಂತೆ ತನಿಖೆಗೆ ಆದೇಶಿಸಲಾಗಿದೆ.