<p><strong>ಅಮರಾವತಿ: </strong>ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಉಂಟಾಗಿರುವ ದಿಢೀರ್ ಪ್ರವಾಹಕ್ಕೆ ಸಿಲುಕಿ ಶುಕ್ರವಾರ ಮೂವರು ಮೃತಪಟ್ಟಿದ್ದು, ಹಲವರು ಕೊಚ್ಚಿ ಹೋಗಿದ್ದಾರೆ.</p>.<p>ಅನ್ನಮಯ್ಯ ಯೋಜನೆಯಡಿ ಚೆಯ್ಯೆರು ನದಿಗೆ ನಿರ್ಮಿಸಲಾಗಿದ್ದ ತಡೆಗೋಡೆ ಒಡೆದ ಪರಿಣಾಮ ದಿಢೀರನೆ ಪ್ರವಾಹ ಉಂಟಾಯಿತು. ಇದರಿಂದ ನದಿ ಪಾತ್ರದ ಕೆಲ ಗ್ರಾಮಗಳಿಗೆ ನೀರು ನುಗ್ಗಿತು ಎಂದು ಮೂಲಗಳು ತಿಳಿಸಿವೆ.</p>.<p>ಇದನ್ನೂ ಓದಿ:<a href="https://www.prajavani.net/india-news/depression-crosses-coast-between-tamil-nadu-and-andhra-pradesh-885100.html" itemprop="url">ವಾಯುಭಾರ ಕುಸಿತ: ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿ ಭಾರಿ ಮಳೆ </a></p>.<p>ರಾಜಂಪೇಟೆಯ ಶಿವನ ದೇವಸ್ಥಾನದಲ್ಲಿ ಕಾರ್ತಿಕ ಪೌರ್ಣಮಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುತ್ತಿದ್ದ ಭಕ್ತರ ಗುಂಪು ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಬಳಿಕ ನಂದಲೂರು ಬಳಿ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರ ಪತ್ತೆಗೆ ಹುಡುಕಾಟ ನಡೆದಿದೆ.</p>.<p>ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಚಿತ್ತೂರು ಮತ್ತು ಕಡಪಾಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ: </strong>ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಉಂಟಾಗಿರುವ ದಿಢೀರ್ ಪ್ರವಾಹಕ್ಕೆ ಸಿಲುಕಿ ಶುಕ್ರವಾರ ಮೂವರು ಮೃತಪಟ್ಟಿದ್ದು, ಹಲವರು ಕೊಚ್ಚಿ ಹೋಗಿದ್ದಾರೆ.</p>.<p>ಅನ್ನಮಯ್ಯ ಯೋಜನೆಯಡಿ ಚೆಯ್ಯೆರು ನದಿಗೆ ನಿರ್ಮಿಸಲಾಗಿದ್ದ ತಡೆಗೋಡೆ ಒಡೆದ ಪರಿಣಾಮ ದಿಢೀರನೆ ಪ್ರವಾಹ ಉಂಟಾಯಿತು. ಇದರಿಂದ ನದಿ ಪಾತ್ರದ ಕೆಲ ಗ್ರಾಮಗಳಿಗೆ ನೀರು ನುಗ್ಗಿತು ಎಂದು ಮೂಲಗಳು ತಿಳಿಸಿವೆ.</p>.<p>ಇದನ್ನೂ ಓದಿ:<a href="https://www.prajavani.net/india-news/depression-crosses-coast-between-tamil-nadu-and-andhra-pradesh-885100.html" itemprop="url">ವಾಯುಭಾರ ಕುಸಿತ: ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿ ಭಾರಿ ಮಳೆ </a></p>.<p>ರಾಜಂಪೇಟೆಯ ಶಿವನ ದೇವಸ್ಥಾನದಲ್ಲಿ ಕಾರ್ತಿಕ ಪೌರ್ಣಮಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುತ್ತಿದ್ದ ಭಕ್ತರ ಗುಂಪು ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಬಳಿಕ ನಂದಲೂರು ಬಳಿ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರ ಪತ್ತೆಗೆ ಹುಡುಕಾಟ ನಡೆದಿದೆ.</p>.<p>ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಚಿತ್ತೂರು ಮತ್ತು ಕಡಪಾಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>