ಚೆನ್ನೈ: ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ವಿದ್ಯುತ್ತಂತಿ ತಗುಲಿ ಮೂರು ಆನೆಗಳು ಮೃತಪಟ್ಟಿವೆ. ಆದರೆ ಆನೆಗಳೊಂದಿಗೆ ಇದ್ದ ಮರಿ ಆನೆಗಳು ಮೃತ ಆನೆಗಳನ್ನು ಬಿಟ್ಟು ಹೋಗದೇ ಅಲ್ಲೇ ಇರುವ ದೃಶ್ಯ ಮನಕಲುಕುವಂತಿದೆ.
ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿರುವುದೇ ಈ ದುರ್ಘಟನೆಗೆ ಕಾರಣವಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿರುವ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.