<p><strong>ಅಯೋಧ್ಯಾ: </strong>ಅಯೋಧ್ಯೆಯನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಕ್ಕೆ ಮೂರು ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರದವೈಸ್ಚೇರಮನ್ ವಿಶಾಲ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.</p>.<p>ಕೆನಡಾ ಮೂಲದ ಬಹುರಾಷ್ಟ್ರೀಯ ಕಂಪನಿ ಎಲ್ಇಎ ಅಸೋಸಿಯೇಟ್ಸ್ ಸೌಥ್ ಏಷ್ಯಾ ಪ್ರೈವೇಟ್ ಲಿಮಿಟೆಡ್, ಭಾರತದ ಕಂಪನಿಗಳಾದ ಎಲ್ಆ್ಯಂಡ್ಟಿ ಹಾಗೂ ಕುಕ್ರೇಜಾ ಆರ್ಕಿಟೆಕ್ಟ್ಸ್ ಅನ್ನು ಅಂತಿಮಗೊಳಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>‘ನಗರದ ಪ್ಲಾನಿಂಗ್, ಸಾರಿಗೆ ವ್ಯವಸ್ಥೆ, ಮೂಲಸೌಲಭ್ಯ ಅಭಿವೃದ್ದಿ, ಹಣಕಾಸು, ಪಾರಂಪರಿಕ ಮಹತ್ವ, ಪ್ರವಾಸೋದ್ಯಮ ಅಭಿವೃದ್ಧಿ, ನವೀಕರಿಸಬಹುದಾದ ಇಂಧನ ಮೂಲಗಳ ಬಳಕೆಯಂತಹ ಅಂಶಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಈ ಕಂಪನಿಗಳು ಸಿದ್ಧಪಡಿಸಲಿವೆ’ ಎಂದು ತಿಳಿಸಿದರು.</p>.<p>ತಿರುಪತಿ ಮಾಸ್ಟರ್ಪ್ಲಾನ್ ಹಾಗೂ ಸ್ಮಾರ್ಟ್ ಸಿಟಿ ಯೋಜನೆಗೆ ಕೆನಡಾ ಮೂಲದ ಕಂಪನಿಯ ಸಹಭಾಗಿತ್ವ ಇದೆ. ಮಲೇಷ್ಯಾದಲ್ಲಿ ಅನುಷ್ಠಾನಗೊಳಿಸಿರುವ ಕ್ಷಿಪ್ರ ಸಾರಿಗೆ ಯೋಜನೆಯನ್ನು ಕುಕ್ರೇಜಾ ಅಸೋಸಿಯೇಟ್ಸ್ ವಿನ್ಯಾಸಗೊಳಿಸಿದೆ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯಾ: </strong>ಅಯೋಧ್ಯೆಯನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಕ್ಕೆ ಮೂರು ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರದವೈಸ್ಚೇರಮನ್ ವಿಶಾಲ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.</p>.<p>ಕೆನಡಾ ಮೂಲದ ಬಹುರಾಷ್ಟ್ರೀಯ ಕಂಪನಿ ಎಲ್ಇಎ ಅಸೋಸಿಯೇಟ್ಸ್ ಸೌಥ್ ಏಷ್ಯಾ ಪ್ರೈವೇಟ್ ಲಿಮಿಟೆಡ್, ಭಾರತದ ಕಂಪನಿಗಳಾದ ಎಲ್ಆ್ಯಂಡ್ಟಿ ಹಾಗೂ ಕುಕ್ರೇಜಾ ಆರ್ಕಿಟೆಕ್ಟ್ಸ್ ಅನ್ನು ಅಂತಿಮಗೊಳಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>‘ನಗರದ ಪ್ಲಾನಿಂಗ್, ಸಾರಿಗೆ ವ್ಯವಸ್ಥೆ, ಮೂಲಸೌಲಭ್ಯ ಅಭಿವೃದ್ದಿ, ಹಣಕಾಸು, ಪಾರಂಪರಿಕ ಮಹತ್ವ, ಪ್ರವಾಸೋದ್ಯಮ ಅಭಿವೃದ್ಧಿ, ನವೀಕರಿಸಬಹುದಾದ ಇಂಧನ ಮೂಲಗಳ ಬಳಕೆಯಂತಹ ಅಂಶಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಈ ಕಂಪನಿಗಳು ಸಿದ್ಧಪಡಿಸಲಿವೆ’ ಎಂದು ತಿಳಿಸಿದರು.</p>.<p>ತಿರುಪತಿ ಮಾಸ್ಟರ್ಪ್ಲಾನ್ ಹಾಗೂ ಸ್ಮಾರ್ಟ್ ಸಿಟಿ ಯೋಜನೆಗೆ ಕೆನಡಾ ಮೂಲದ ಕಂಪನಿಯ ಸಹಭಾಗಿತ್ವ ಇದೆ. ಮಲೇಷ್ಯಾದಲ್ಲಿ ಅನುಷ್ಠಾನಗೊಳಿಸಿರುವ ಕ್ಷಿಪ್ರ ಸಾರಿಗೆ ಯೋಜನೆಯನ್ನು ಕುಕ್ರೇಜಾ ಅಸೋಸಿಯೇಟ್ಸ್ ವಿನ್ಯಾಸಗೊಳಿಸಿದೆ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>