<p class="title"><strong>ಪುಣೆ: </strong>ಸೀರಂ ಇನ್ಸ್ಟಿಟ್ಯೂಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡ ಕುರಿತಂತೆ ಮೂರು ಪ್ರತ್ಯೇಕ ಸಂಸ್ಥೆಗಳು ಒಟ್ಟಾಗಿ ತನಿಖೆ ನಡೆಸಲಿವೆ. ಅಗ್ನಿ ಅವಘಡದ ಹಿಂದಿನ ಕಾರಣಗಳನ್ನು ತಿಳಿಯಲು ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ.</p>.<p class="title">ಪುಣೆ ನಗರಸಭೆಯ (ಪಿಎಂಸಿ) ಅಗ್ನಿಶಾಮಕ ಇಲಾಖೆ, ಪುಣೆ ಮಹಾನಗಗರ ವಲಯ ಅಭಿವೃದ್ಧಿ ಪ್ರಾಧಿಕಾರ (ಪಿಎಂಆರ್ಡಿಎ) ಮತ್ತು ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ (ಎಂಐಡಿಸಿ) ಜಂಟಿ ತನಿಖೆಯನ್ನು ನಡೆಸಲಿವೆ.</p>.<p>ಇಲ್ಲಿನ ಐದು ಮಹಡಿಯ ಕಟ್ಟಡದಲ್ಲಿರುವ ಸೀರಂ ಇನ್ಸ್ಟಿಟ್ಯೂಟ್ ಆವರಣದಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಐವರು ಗುತ್ತಿಗೆ ನೌಕರರು ಮೃತಪಟ್ಟಿದ್ದರು. ಮೇಲಿನ ಎರಡು ಮಹಡಿಯಲ್ಲಿ ಅವಘಡದ ಪರಿಣಾಮ ತೀವ್ರವಾಗಿತ್ತು.</p>.<p>ಪಿಎಂಆರ್ಡಿಎ ಮುಖ್ಯ ಅಗ್ನಿಶಾಮಕ ಅಧಿಕಾರಿ ದೇವೇಂದ್ರ ಪೋಟ್ಪೊಡೆ ಅವರು, ದುರಂತದ ಹಿಂದಿನ ಕಾರಣ ತಿಳಿಯಲು ಮೂರು ಸಂಸ್ಥೆಗಳು ಒಟ್ಟಾಗಿ ತನಿಖೆ ನಡೆಸುತ್ತಿವೆ ಎಂದು ತಿಳಿಸಿದರು.</p>.<p>ಈ ಮಧ್ಯೆ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಮತ್ತು ಅಗ್ನಿ ಅವಘಡ ಕುರಿತಂತೆ ಪ್ರಕರಣ ದಾಖಲಾಗಿದೆ ಎಂದು ಉಪ ಪೊಲೀಸ್ ಕಮಿಷನರ್ ನಮ್ರತಾ ಪಾಟೀಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪುಣೆ: </strong>ಸೀರಂ ಇನ್ಸ್ಟಿಟ್ಯೂಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡ ಕುರಿತಂತೆ ಮೂರು ಪ್ರತ್ಯೇಕ ಸಂಸ್ಥೆಗಳು ಒಟ್ಟಾಗಿ ತನಿಖೆ ನಡೆಸಲಿವೆ. ಅಗ್ನಿ ಅವಘಡದ ಹಿಂದಿನ ಕಾರಣಗಳನ್ನು ತಿಳಿಯಲು ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ.</p>.<p class="title">ಪುಣೆ ನಗರಸಭೆಯ (ಪಿಎಂಸಿ) ಅಗ್ನಿಶಾಮಕ ಇಲಾಖೆ, ಪುಣೆ ಮಹಾನಗಗರ ವಲಯ ಅಭಿವೃದ್ಧಿ ಪ್ರಾಧಿಕಾರ (ಪಿಎಂಆರ್ಡಿಎ) ಮತ್ತು ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ (ಎಂಐಡಿಸಿ) ಜಂಟಿ ತನಿಖೆಯನ್ನು ನಡೆಸಲಿವೆ.</p>.<p>ಇಲ್ಲಿನ ಐದು ಮಹಡಿಯ ಕಟ್ಟಡದಲ್ಲಿರುವ ಸೀರಂ ಇನ್ಸ್ಟಿಟ್ಯೂಟ್ ಆವರಣದಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಐವರು ಗುತ್ತಿಗೆ ನೌಕರರು ಮೃತಪಟ್ಟಿದ್ದರು. ಮೇಲಿನ ಎರಡು ಮಹಡಿಯಲ್ಲಿ ಅವಘಡದ ಪರಿಣಾಮ ತೀವ್ರವಾಗಿತ್ತು.</p>.<p>ಪಿಎಂಆರ್ಡಿಎ ಮುಖ್ಯ ಅಗ್ನಿಶಾಮಕ ಅಧಿಕಾರಿ ದೇವೇಂದ್ರ ಪೋಟ್ಪೊಡೆ ಅವರು, ದುರಂತದ ಹಿಂದಿನ ಕಾರಣ ತಿಳಿಯಲು ಮೂರು ಸಂಸ್ಥೆಗಳು ಒಟ್ಟಾಗಿ ತನಿಖೆ ನಡೆಸುತ್ತಿವೆ ಎಂದು ತಿಳಿಸಿದರು.</p>.<p>ಈ ಮಧ್ಯೆ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಮತ್ತು ಅಗ್ನಿ ಅವಘಡ ಕುರಿತಂತೆ ಪ್ರಕರಣ ದಾಖಲಾಗಿದೆ ಎಂದು ಉಪ ಪೊಲೀಸ್ ಕಮಿಷನರ್ ನಮ್ರತಾ ಪಾಟೀಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>