45 ವರ್ಷದ ಅಸ್ರಾರ್ ಅಹ್ಮದ್ ಎಂಬುವರನ್ನು ಕೆಲವು ವ್ಯಕ್ತಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಥಳಿಸಿದ ದೃಶ್ಯವಿರುವ ಒಂದು ನಿಮಿಷದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅಹ್ಮದ್ ಅವರ ಪುತ್ರಿ ತನ್ನ ತಂದೆಯನ್ನು ದಾಳಿಕೋರರಿಂದ ರಕ್ಷಿಸಲು ಪ್ರಯತ್ನಿಸುತ್ತಿರುವುದು, ತಂದೆಯನ್ನು ಹೊಡೆಯಬೇಡಿ ಎಂದುಅಳುತ್ತಾ ದಾಳಿಕೋರರನ್ನು ಬೇಡಿಕೊಳ್ಳುತ್ತಿರುವ ದೃಶ್ಯ ಈ ವಿಡಿಯೊದಲ್ಲಿತ್ತು. ಕಾನ್ಪುರದ ಬರ್ರಾ ಪ್ರದೇಶದ ಕಚ್ಚಿ ಬಸ್ತಿಯಲ್ಲಿ ಬುಧವಾರ ಈ ಘಟನೆ ನಡೆದಿತ್ತು.