<p><strong>ಗುರುಗ್ರಾಮ</strong>: ಕಲ್ಲಿದ್ದಲು ತುಂಬಿದ್ದ ಟ್ರಕ್ ರಸ್ತೆ ಬದಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಪರಿಣಾಮ ಮೂವರು ಮೃತಪಟ್ಟು, 11 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.<br /><br />ಝಜ್ಜಾರ್ ಜಿಲ್ಲೆಯ ಕುಂಡ್ಲಿ–ಮನೇಸರ್–ಪಲ್ವಾಲ್ ಎಕ್ಸ್ಪ್ರೆಸ್ ವೇ, ಆಸೋಡಾ ಟೋಲ್ ಪ್ಲಾಜಾ ಬಳಿ ಈ ದುರ್ಘಟನೆ ಸಂಭವಿಸಿದೆ.</p>.<p>ಗಾಯಾಳುಗಳನ್ನು ರೊಹ್ಟಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಅಪಘಾತ ನಡೆದಾಗ 18 ಮಂದಿ ರಸ್ತೆ ಬದಿ ಮಲಗಿದ್ದರು. ನಾಲ್ವರು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.</p>.<p>ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಈ ಕಾರ್ಮಿಕರನ್ನು ರಸ್ತೆ ರಿಪೇರಿ ಕೆಲಸಕ್ಕೆ ನಿಯೋಜಿಸಲಾಗಿತ್ತು ಎಂದು ಡಿಸಿಪಿ ಶಕ್ತಿ ಸಿಂಗ್ ಹೇಳಿದ್ದಾರೆ.</p>.<p>ಮಲಗಲು ಜಾಗಕ್ಕಾಗಿ ರಸ್ತೆಯ ಒಂದು ಬದಿಯಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಆದರೆ, ರಭಸದಿಂದ ಡಿಕ್ಕಿ ಹೊಡೆದ ಟ್ರಕ್, ಮಲಗಿದ್ದವರ ಮೇಲೂ ಹರಿದಿದೆ.</p>.<p>ಇದನ್ನೂ ಓದಿ..<a href="https://www.prajavani.net/world-news/us-sees-first-monkeypox-case-of-2022-as-europe-reports-small-outbreaks-937998.html" itemprop="url">ವಿಶ್ವದ ಹಲವೆಡೆ ಮಂಕಿಪಾಕ್ಸ್ ಆತಂಕ: ಅಮೆರಿಕದಲ್ಲಿ 1, ಪೋರ್ಚುಗಲ್ನಲ್ಲಿ 5 ಪ್ರಕರಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಗ್ರಾಮ</strong>: ಕಲ್ಲಿದ್ದಲು ತುಂಬಿದ್ದ ಟ್ರಕ್ ರಸ್ತೆ ಬದಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಪರಿಣಾಮ ಮೂವರು ಮೃತಪಟ್ಟು, 11 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.<br /><br />ಝಜ್ಜಾರ್ ಜಿಲ್ಲೆಯ ಕುಂಡ್ಲಿ–ಮನೇಸರ್–ಪಲ್ವಾಲ್ ಎಕ್ಸ್ಪ್ರೆಸ್ ವೇ, ಆಸೋಡಾ ಟೋಲ್ ಪ್ಲಾಜಾ ಬಳಿ ಈ ದುರ್ಘಟನೆ ಸಂಭವಿಸಿದೆ.</p>.<p>ಗಾಯಾಳುಗಳನ್ನು ರೊಹ್ಟಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಅಪಘಾತ ನಡೆದಾಗ 18 ಮಂದಿ ರಸ್ತೆ ಬದಿ ಮಲಗಿದ್ದರು. ನಾಲ್ವರು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.</p>.<p>ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಈ ಕಾರ್ಮಿಕರನ್ನು ರಸ್ತೆ ರಿಪೇರಿ ಕೆಲಸಕ್ಕೆ ನಿಯೋಜಿಸಲಾಗಿತ್ತು ಎಂದು ಡಿಸಿಪಿ ಶಕ್ತಿ ಸಿಂಗ್ ಹೇಳಿದ್ದಾರೆ.</p>.<p>ಮಲಗಲು ಜಾಗಕ್ಕಾಗಿ ರಸ್ತೆಯ ಒಂದು ಬದಿಯಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಆದರೆ, ರಭಸದಿಂದ ಡಿಕ್ಕಿ ಹೊಡೆದ ಟ್ರಕ್, ಮಲಗಿದ್ದವರ ಮೇಲೂ ಹರಿದಿದೆ.</p>.<p>ಇದನ್ನೂ ಓದಿ..<a href="https://www.prajavani.net/world-news/us-sees-first-monkeypox-case-of-2022-as-europe-reports-small-outbreaks-937998.html" itemprop="url">ವಿಶ್ವದ ಹಲವೆಡೆ ಮಂಕಿಪಾಕ್ಸ್ ಆತಂಕ: ಅಮೆರಿಕದಲ್ಲಿ 1, ಪೋರ್ಚುಗಲ್ನಲ್ಲಿ 5 ಪ್ರಕರಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>