ಶ್ರೀನಗರ (ಪಿಟಿಐ):ಜಮ್ಮು ಮತ್ತು ಕಾಶ್ಮೀರದ ಬಡ್ಗಾಂ ಜಿಲ್ಲೆಯಲ್ಲಿ,ರಾಹುಲ್ ಭಟ್ ಹಾಗೂ ಟಿ.ವಿ. ಕಲಾವಿದೆ ಅಮ್ರೀನ್ ಭಟ್ ಅವರ ಹತ್ಯೆಗೆ ಕಾರಣವಾಗಿದ್ದ ಲಷ್ಕರ್–ಎ–ತಯಬಾ ಸಂಘಟನೆಯ ಭಯೋತ್ಪಾದಕ ಲತೀಫ್ ರಾಥರ್ ಸೇರಿದಂತೆ ಮೂವರು ಉಗ್ರರು ಬುಧವಾರ ಎಕ್ಕೌಂಟರ್ನಲ್ಲಿ ಹತರಾಗಿದ್ದಾರೆ.
‘ಬಡ್ಗಾಂನ ಖಾನ್ಸಾಹಿಬ್ ಪ್ರದೇಶದ ವಾಟರ್ಹೇಲ್ನಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು. ಈ ವೇಳೆ ಉಗ್ರರು ಪಡೆಗಳ ಮೇಲೆ ಗುಂಡು ಹಾರಿಸಿದ್ದರಿಂದಶೋಧ ಕಾರ್ಯಾಚರಣೆ ಎನ್ಕೌಂಟರ್ ಆಗಿ ಮಾರ್ಪಟ್ಟಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.