<p><strong>ಡೆಹ್ರಾಡೂನ್</strong>: ‘ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಮೇಘ ಸ್ಫೋಟದಿಂದಾಗಿ ತಾಯಿ–ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.</p>.<p>‘ಭಾನುವಾರ ರಾತ್ರಿ ಮಾಂಡವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದರಲ್ಲಿ ಮಾಧುರಿ ದೇವಿ(36), ರಿತು ದೇವಿ(32) ಮತ್ತು ಅವರ ಮೂರು ವರ್ಷದ ಪುತ್ರಿ ತ್ರಿಶ್ವಿ ಮೃತಪಟ್ಟಿದ್ದಾರೆ’ ಎಂದು ಉತ್ತರಕಾಶಿಯ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪತ್ವಾಲ್ ಅವರು ಹೇಳಿದರು.</p>.<p>‘ನೆರೆಯ ಕಂಕಾರಿ ಗ್ರಾಮದಲ್ಲೂ ಮೇಘ ಸ್ಪೋಟದಿಂದಾಗಿ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ನಡೆಸಲಾಗುತ್ತಿದೆ. ಪೀಡಿತ ಪ್ರದೇಶಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈಗಾಗಲೇ ಕೊಳೆಗೇರಿಗಳಲ್ಲಿ ಸಿಲುಕಿರುವ ಹೆಚ್ಚಿನ ಜನರನ್ನು ರಕ್ಷಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಈ ಘಟನೆಯಲ್ಲಿ ಸಾವಿಗೀಡಾದವರಿಗೆ ಸಂತಾಪ ಸೂಚಿರುವ ಮುಖ್ಯಮಂತ್ರಿ ಪುಷ್ಕರ್ಸಿಂಗ್ ಧಾಮಿ ಅವರು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಉತ್ತರಕಾಶಿ ಜಿಲ್ಲಾಧಿಕಾರಿಗೆ ಸೂಚಿಸಿದ್ಧಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್</strong>: ‘ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಮೇಘ ಸ್ಫೋಟದಿಂದಾಗಿ ತಾಯಿ–ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.</p>.<p>‘ಭಾನುವಾರ ರಾತ್ರಿ ಮಾಂಡವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದರಲ್ಲಿ ಮಾಧುರಿ ದೇವಿ(36), ರಿತು ದೇವಿ(32) ಮತ್ತು ಅವರ ಮೂರು ವರ್ಷದ ಪುತ್ರಿ ತ್ರಿಶ್ವಿ ಮೃತಪಟ್ಟಿದ್ದಾರೆ’ ಎಂದು ಉತ್ತರಕಾಶಿಯ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪತ್ವಾಲ್ ಅವರು ಹೇಳಿದರು.</p>.<p>‘ನೆರೆಯ ಕಂಕಾರಿ ಗ್ರಾಮದಲ್ಲೂ ಮೇಘ ಸ್ಪೋಟದಿಂದಾಗಿ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ನಡೆಸಲಾಗುತ್ತಿದೆ. ಪೀಡಿತ ಪ್ರದೇಶಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈಗಾಗಲೇ ಕೊಳೆಗೇರಿಗಳಲ್ಲಿ ಸಿಲುಕಿರುವ ಹೆಚ್ಚಿನ ಜನರನ್ನು ರಕ್ಷಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಈ ಘಟನೆಯಲ್ಲಿ ಸಾವಿಗೀಡಾದವರಿಗೆ ಸಂತಾಪ ಸೂಚಿರುವ ಮುಖ್ಯಮಂತ್ರಿ ಪುಷ್ಕರ್ಸಿಂಗ್ ಧಾಮಿ ಅವರು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಉತ್ತರಕಾಶಿ ಜಿಲ್ಲಾಧಿಕಾರಿಗೆ ಸೂಚಿಸಿದ್ಧಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>