ಗಂಭೀರವಾಗಿ ಗಾಯಗೊಂಡಿದ್ದ ನಿರ್ವೇಂದ್ರಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರೊಳಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದರು. ಆದರೆ, ಗಲಭೆ ಸಂದರ್ಭದಲ್ಲಿ ಹೃದಯಾಘಾತದಿಂದ ಮಿಶ್ರಾ ನಿಧನ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಹೇಳಿಕೆಯನ್ನು ಮಿಶ್ರಾ ಅವರ ಪುತ್ರ ತಿರಸ್ಕರಿಸಿದ್ದು, ನನ್ನ ತಂದೆಯನ್ನು ಹೊಡೆದು ಸಾಯಿಸಲಾಗಿದೆ ಎಂದಿದ್ದಾರೆ.