‘ಸರ್ಕಾರವು ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕಾಯ್ದೆ ಜಾರಿಗೊಳಿಸುವವರೆಗೆ ಕೃಷಿ ಕಾನೂನುಗಳ ವಿರುದ್ಧದ ಆಂದೋಲನ ಮುಂದುವರಿಯಲಿದೆ.ರೈತರ ಆಂದೋಲನವನ್ನು ದೆಹಲಿಯ ಗಡಿಯಿಂದ ಹರಿಯಾಣದ ರೋಹ್ಟಕ್–ಜಿಂದ್ ಗಡಿಗೆ ಸ್ಥಳಾಂತರಿಸಲು ಸರ್ಕಾರ ಬಯಸಿದೆ. ಆದರೆ ಇದು ಯಶಸ್ವಿಯಾಗಲು ಬಿಡುವುದಿಲ್ಲ’ ಎಂದು ಟಿಕಾಯತ್ ಹೇಳಿದ್ದಾರೆ.