<p><strong>ಜಮ್ಮು:</strong> ಜಮ್ಮುವಿನಲ್ಲಿ ಜನರನ್ನು ಕಡೆಗಣಿಸುವ ಕಾಲ ಮುಗಿದಿದೆ. ಇದೀಗ ಜಮ್ಮು ಮತ್ತು ಕಾಶ್ಮೀರ ಒಟ್ಟಾಗಿ ಅಭಿವೃದ್ಧಿ ಸಾಧಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ಹಿಂಪಡೆದ ಬಳಿಕ ಮತ್ತು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆ ಅವರುಇಲ್ಲಿಗೆ ಭೇಟಿ ನೀಡಿದ್ದಾರೆ.</p>.<p>ಭಗವತಿ ನಗರ್ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಯಾರೊಬ್ಬರೂ ತಡೆಯೊಡ್ಡಲಾರರು. ಕೇಂದ್ರಾಡಳಿತ ಪ್ರದೇಶದಲ್ಲಿ ಈಗಾಗಲೇ ₹ 12,000 ಕೋಟಿ ಹೂಡಿಕೆ ಮಾಡಲಾಗಿದೆ. 2022ರ ಅಂತ್ಯದ ವೇಳೆಗೆ ₹ 51,000 ಕೋಟಿ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.</p>.<p>ಕಣಿವೆಯಲ್ಲಿ ಗಲಭೆ ಮತ್ತು ಉಗ್ರರ ದಾಳಿಯಿಂದ ಯಾರೊಬ್ಬರ ಜೀವಕ್ಕೂ ಅಪಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶ ಎಂದಿರುವ ಶಾ, ಯುವಕರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೈ ಜೋಡಿಸಿದರೆ, ಉಗ್ರರ ದುಷ್ಟ ಸಂಚುಗಳು ವಿಫಲವಾಗಲಿವೆ ಎಂದು ಕಿವಿಮಾತು ಹೇಳಿದ್ದಾರೆ.</p>.<p>ಶಾ ಅವರು ಮೂರು ದಿನಗಳ ಭೇಟಿ ಸಲುವಾಗಿ ಶನಿವಾರ ಇಲ್ಲಿಗೆ ಆಗಮಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.<p>ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರು ಸರಣಿ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಗೃಹ ಸಚಿವರು ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.</p>.<p><strong>ಇವನ್ನೂ ಓದಿ<br />*</strong><a href="https://cms.prajavani.net/india-news/state-name-for-jammu-kashmir-after-elections-amit-shah-878129.html" itemprop="url">ಚುನಾವಣೆ ಬಳಿಕ ಜಮ್ಮು–ಕಾಶ್ಮೀರಕ್ಕೆ ರಾಜ್ಯದ ಸ್ಥಾನ: ಅಮಿತ್ ಶಾ </a><br /><strong>*</strong><a href="https://cms.prajavani.net/india-news/strategy-to-be-drafted-to-finish-militancy-in-jammu-and-kashmir-during-amit-shahs-visit-877582.html" itemprop="url">ನಾಳೆಯಿಂದ ಜಮ್ಮುವಿನಲ್ಲಿ ಅಮಿತ್ ಶಾ ಪ್ರವಾಸ: ಉಗ್ರರ ಉಪಟಳ ಅಂತ್ಯಕ್ಕೆ ಕಾರ್ಯತಂತ್ರ</a><br />*<a href="https://cms.prajavani.net/india-news/union-home-minister-amit-shah-arrives-in-srinagar-security-issues-on-agenda-877894.html" itemprop="url">ಜಮ್ಮು ಮತ್ತು ಕಾಶ್ಮೀರದ ಭದ್ರತೆ ಪರಿಶೀಲನೆ: ಶ್ರೀನಗರಕ್ಕೆ ಆಗಮಿಸಿದ ಅಮಿತ್ ಶಾ </a><br /><strong>*</strong><a href="https://cms.prajavani.net/india-news/terrorism-will-avenge-every-drop-of-innocent-blood-in-jammu-and-kashmir-lg-manoj-sinha-876413.html" itemprop="url">ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್ ಸಿನ್ಹಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಜಮ್ಮುವಿನಲ್ಲಿ ಜನರನ್ನು ಕಡೆಗಣಿಸುವ ಕಾಲ ಮುಗಿದಿದೆ. ಇದೀಗ ಜಮ್ಮು ಮತ್ತು ಕಾಶ್ಮೀರ ಒಟ್ಟಾಗಿ ಅಭಿವೃದ್ಧಿ ಸಾಧಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ಹಿಂಪಡೆದ ಬಳಿಕ ಮತ್ತು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆ ಅವರುಇಲ್ಲಿಗೆ ಭೇಟಿ ನೀಡಿದ್ದಾರೆ.</p>.<p>ಭಗವತಿ ನಗರ್ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಯಾರೊಬ್ಬರೂ ತಡೆಯೊಡ್ಡಲಾರರು. ಕೇಂದ್ರಾಡಳಿತ ಪ್ರದೇಶದಲ್ಲಿ ಈಗಾಗಲೇ ₹ 12,000 ಕೋಟಿ ಹೂಡಿಕೆ ಮಾಡಲಾಗಿದೆ. 2022ರ ಅಂತ್ಯದ ವೇಳೆಗೆ ₹ 51,000 ಕೋಟಿ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.</p>.<p>ಕಣಿವೆಯಲ್ಲಿ ಗಲಭೆ ಮತ್ತು ಉಗ್ರರ ದಾಳಿಯಿಂದ ಯಾರೊಬ್ಬರ ಜೀವಕ್ಕೂ ಅಪಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶ ಎಂದಿರುವ ಶಾ, ಯುವಕರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೈ ಜೋಡಿಸಿದರೆ, ಉಗ್ರರ ದುಷ್ಟ ಸಂಚುಗಳು ವಿಫಲವಾಗಲಿವೆ ಎಂದು ಕಿವಿಮಾತು ಹೇಳಿದ್ದಾರೆ.</p>.<p>ಶಾ ಅವರು ಮೂರು ದಿನಗಳ ಭೇಟಿ ಸಲುವಾಗಿ ಶನಿವಾರ ಇಲ್ಲಿಗೆ ಆಗಮಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.<p>ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರು ಸರಣಿ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಗೃಹ ಸಚಿವರು ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.</p>.<p><strong>ಇವನ್ನೂ ಓದಿ<br />*</strong><a href="https://cms.prajavani.net/india-news/state-name-for-jammu-kashmir-after-elections-amit-shah-878129.html" itemprop="url">ಚುನಾವಣೆ ಬಳಿಕ ಜಮ್ಮು–ಕಾಶ್ಮೀರಕ್ಕೆ ರಾಜ್ಯದ ಸ್ಥಾನ: ಅಮಿತ್ ಶಾ </a><br /><strong>*</strong><a href="https://cms.prajavani.net/india-news/strategy-to-be-drafted-to-finish-militancy-in-jammu-and-kashmir-during-amit-shahs-visit-877582.html" itemprop="url">ನಾಳೆಯಿಂದ ಜಮ್ಮುವಿನಲ್ಲಿ ಅಮಿತ್ ಶಾ ಪ್ರವಾಸ: ಉಗ್ರರ ಉಪಟಳ ಅಂತ್ಯಕ್ಕೆ ಕಾರ್ಯತಂತ್ರ</a><br />*<a href="https://cms.prajavani.net/india-news/union-home-minister-amit-shah-arrives-in-srinagar-security-issues-on-agenda-877894.html" itemprop="url">ಜಮ್ಮು ಮತ್ತು ಕಾಶ್ಮೀರದ ಭದ್ರತೆ ಪರಿಶೀಲನೆ: ಶ್ರೀನಗರಕ್ಕೆ ಆಗಮಿಸಿದ ಅಮಿತ್ ಶಾ </a><br /><strong>*</strong><a href="https://cms.prajavani.net/india-news/terrorism-will-avenge-every-drop-of-innocent-blood-in-jammu-and-kashmir-lg-manoj-sinha-876413.html" itemprop="url">ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್ ಸಿನ್ಹಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>