<p>ನವದೆಹಲಿ: ‘ಮುಸ್ಲಿಮರನ್ನು ಬೆದರಿಕೆಯಂತೆ ಪ್ರತಿಬಿಂಬಿಸಲು ಹಿಂದೂತ್ವ ಗುಂಪುಗಳು ಹೇಳುತ್ತಿರುವ ಸುಳ್ಳುಗಳನ್ನು ಬಯಲು ಮಾಡುವ ಸಮಯ ಬಂದಿದೆ’ ಎಂದು ಮಾಜಿ ಚುನಾವಣಾ ಆಯುಕ್ತ ಎಸ್.ವೈ ಖುರೇಷಿ ಅವರು ಹೇಳಿದರು.</p>.<p>‘ಕುಟುಂಬ ಯೋಜನೆ ಪರಿಕಲ್ಪನೆಯನ್ನು ಇಸ್ಲಾಂ ಧರ್ಮ ವಿರೋಧಿಸುವುದಿಲ್ಲ. ಅಲ್ಲದೆ ಭಾರತದಲ್ಲಿ ಇತರೆ ಸಮುದಾಯಕ್ಕಿಂತ ಇಸ್ಲಾಂ ಧರ್ಮದಲ್ಲಿ ಬಹುಪತ್ನಿತ್ವ ಕಡಿಮೆಯಿದೆ’ ಎಂದರು.</p>.<p>‘ದೇಶದಲ್ಲಿ ಹಿಂದೂ ಸಮುದಾಯವನ್ನು ಹಿಂದಿಕ್ಕಿ ಮುಸ್ಲಿಮರ ಸಂಖ್ಯೆಯನ್ನು ಹೆಚ್ಚಿಸಲು ಯಾವುದೇ ಪಿತೂರಿ ನಡೆದಿಲ್ಲ. ಹಿಂದೂ ಸಮುದಾಯದ ಜನಸಂಖ್ಯೆಯನ್ನು ನಮಗೆ ದಾಟಲು ಸಾಧ್ಯವಿಲ್ಲ’ ಎಂದು ಇತ್ತೀಚೆಗೆ ಬಿಡುಗಡೆಯಾದ ತಮ್ಮ ‘ದಿ ಪಾಪ್ಯುಲೇಷನ್ ಮಿಥ್: ಇಸ್ಲಾಂ, ಫ್ಯಾಮಿಲಿ ಪ್ಲಾನಿಂಗ್ ಆ್ಯಂಡ್ ಪಾಲಿಟಿಕ್ಸ್ ಇನ್ ಇಂಡಿಯಾ’ ಎಂಬ ಪುಸ್ತಕದಲ್ಲಿ ವಾದಿಸಿದ್ದಾರೆ.</p>.<p>‘ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ, ಅದು ಸತ್ಯವೆಂಬಂತೆ ಪರಿವರ್ತನೆಯಾಗುತ್ತದೆ. ಹಾಗಾಗಿ ಮುಸ್ಲಿಂ ಸಮುದಾಯದ ವಿರುದ್ಧದ ಪ್ರಚಾರ ಮಾಡುತ್ತಿರುವ ಈ ಸುಳ್ಳನ್ನು ಎದುರಿಸುವ ಸಮಯ ಬಂದಿದೆ. ಇಸ್ಲಾಂ ಕುಟುಂಬ ಯೋಜನೆಯ ವಿರುದ್ಧವಾಗಿದೆ ಎಂಬ ಸುಳ್ಳನ್ನು ಮುಸ್ಲಿಂ ಸಮುದಾಯದವರು ಕೂಡ ನಂಬಿದ್ದಾರೆ. ಆದರೆ ಇದು ಸತ್ಯವಲ್ಲ’ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದರು.</p>.<p>‘ಕುರಾನ್ನಲ್ಲಿ ಎಲ್ಲಿಯೂ ಕುಟುಂಬ ಯೋಜನೆಗೆ ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ ಯುವಕರು ಕುಟುಂಬವನ್ನು ನೋಡಿಕೊಳ್ಳುವಷ್ಟು ಸಮರ್ಥರಾದ ಮೇಲೆ ಮಾತ್ರ ಮದುವೆಯಾಗುವಂತೆ ಕುರಾನ್ನಲ್ಲಿ ಹೇಳಲಾಗಿದೆ’ ಎಂದು ಅವರು ಹೇಳಿದರು.</p>.<p>‘70 ವರ್ಷಗಳಲ್ಲಿ ಹಿಂದೂ ಜನಸಂಖ್ಯೆ ಶೇಕಡ 84.1ರಿಂದ ಶೇಕಡ 79.8ಕ್ಕೆ ಇಳಿದಿರುವುದು ನಿಜ. ಈ ಸಮಯದಲ್ಲಿ ಮುಸ್ಲಿಮರ ಸಂಖ್ಯೆಯೂ ಹೆಚ್ಚಾಯಿತು. ಆದರೆ ಮೂರು ದಶಕಗಳಲ್ಲಿ ಮುಸ್ಲಿಂ ಸಮುದಾಯದಲ್ಲಿ ಕುಟುಂಬ ಯೋಜನೆಯನ್ನು ಅಳವಡಿಸುವವರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ‘ಮುಸ್ಲಿಮರನ್ನು ಬೆದರಿಕೆಯಂತೆ ಪ್ರತಿಬಿಂಬಿಸಲು ಹಿಂದೂತ್ವ ಗುಂಪುಗಳು ಹೇಳುತ್ತಿರುವ ಸುಳ್ಳುಗಳನ್ನು ಬಯಲು ಮಾಡುವ ಸಮಯ ಬಂದಿದೆ’ ಎಂದು ಮಾಜಿ ಚುನಾವಣಾ ಆಯುಕ್ತ ಎಸ್.ವೈ ಖುರೇಷಿ ಅವರು ಹೇಳಿದರು.</p>.<p>‘ಕುಟುಂಬ ಯೋಜನೆ ಪರಿಕಲ್ಪನೆಯನ್ನು ಇಸ್ಲಾಂ ಧರ್ಮ ವಿರೋಧಿಸುವುದಿಲ್ಲ. ಅಲ್ಲದೆ ಭಾರತದಲ್ಲಿ ಇತರೆ ಸಮುದಾಯಕ್ಕಿಂತ ಇಸ್ಲಾಂ ಧರ್ಮದಲ್ಲಿ ಬಹುಪತ್ನಿತ್ವ ಕಡಿಮೆಯಿದೆ’ ಎಂದರು.</p>.<p>‘ದೇಶದಲ್ಲಿ ಹಿಂದೂ ಸಮುದಾಯವನ್ನು ಹಿಂದಿಕ್ಕಿ ಮುಸ್ಲಿಮರ ಸಂಖ್ಯೆಯನ್ನು ಹೆಚ್ಚಿಸಲು ಯಾವುದೇ ಪಿತೂರಿ ನಡೆದಿಲ್ಲ. ಹಿಂದೂ ಸಮುದಾಯದ ಜನಸಂಖ್ಯೆಯನ್ನು ನಮಗೆ ದಾಟಲು ಸಾಧ್ಯವಿಲ್ಲ’ ಎಂದು ಇತ್ತೀಚೆಗೆ ಬಿಡುಗಡೆಯಾದ ತಮ್ಮ ‘ದಿ ಪಾಪ್ಯುಲೇಷನ್ ಮಿಥ್: ಇಸ್ಲಾಂ, ಫ್ಯಾಮಿಲಿ ಪ್ಲಾನಿಂಗ್ ಆ್ಯಂಡ್ ಪಾಲಿಟಿಕ್ಸ್ ಇನ್ ಇಂಡಿಯಾ’ ಎಂಬ ಪುಸ್ತಕದಲ್ಲಿ ವಾದಿಸಿದ್ದಾರೆ.</p>.<p>‘ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ, ಅದು ಸತ್ಯವೆಂಬಂತೆ ಪರಿವರ್ತನೆಯಾಗುತ್ತದೆ. ಹಾಗಾಗಿ ಮುಸ್ಲಿಂ ಸಮುದಾಯದ ವಿರುದ್ಧದ ಪ್ರಚಾರ ಮಾಡುತ್ತಿರುವ ಈ ಸುಳ್ಳನ್ನು ಎದುರಿಸುವ ಸಮಯ ಬಂದಿದೆ. ಇಸ್ಲಾಂ ಕುಟುಂಬ ಯೋಜನೆಯ ವಿರುದ್ಧವಾಗಿದೆ ಎಂಬ ಸುಳ್ಳನ್ನು ಮುಸ್ಲಿಂ ಸಮುದಾಯದವರು ಕೂಡ ನಂಬಿದ್ದಾರೆ. ಆದರೆ ಇದು ಸತ್ಯವಲ್ಲ’ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದರು.</p>.<p>‘ಕುರಾನ್ನಲ್ಲಿ ಎಲ್ಲಿಯೂ ಕುಟುಂಬ ಯೋಜನೆಗೆ ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ ಯುವಕರು ಕುಟುಂಬವನ್ನು ನೋಡಿಕೊಳ್ಳುವಷ್ಟು ಸಮರ್ಥರಾದ ಮೇಲೆ ಮಾತ್ರ ಮದುವೆಯಾಗುವಂತೆ ಕುರಾನ್ನಲ್ಲಿ ಹೇಳಲಾಗಿದೆ’ ಎಂದು ಅವರು ಹೇಳಿದರು.</p>.<p>‘70 ವರ್ಷಗಳಲ್ಲಿ ಹಿಂದೂ ಜನಸಂಖ್ಯೆ ಶೇಕಡ 84.1ರಿಂದ ಶೇಕಡ 79.8ಕ್ಕೆ ಇಳಿದಿರುವುದು ನಿಜ. ಈ ಸಮಯದಲ್ಲಿ ಮುಸ್ಲಿಮರ ಸಂಖ್ಯೆಯೂ ಹೆಚ್ಚಾಯಿತು. ಆದರೆ ಮೂರು ದಶಕಗಳಲ್ಲಿ ಮುಸ್ಲಿಂ ಸಮುದಾಯದಲ್ಲಿ ಕುಟುಂಬ ಯೋಜನೆಯನ್ನು ಅಳವಡಿಸುವವರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>