ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಿಂದ ತಿರಂಗ ಬೈಕ್‌ ರ‍್ಯಾಲಿ: ಎಲ್ಲ ಪಕ್ಷಗಳೂ ಭಾಗವಹಿಸಬೇಕೆಂದ ಸಚಿವ ಜೋಶಿ

Last Updated 2 ಆಗಸ್ಟ್ 2022, 6:47 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯವು ಬುಧವಾರ ಬೆಳಗ್ಗೆನವದೆಹಲಿಯ ಕೆಂಪುಕೋಟೆಯಿಂದ ಸಂಸತ್ತಿನವರೆಗೆ ಸಂಸದರಿಗಾಗಿ 'ತಿರಂಗ ಬೈಕ್ ರ‍್ಯಾಲಿ' ಆಯೋಜಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರು ಈ ರ‍್ಯಾಲಿಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಮಂಗಳವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಜೋಶಿ, ಇದು ಸಂಸ್ಕೃತಿ ಸಚಿವಾಲಯದ ಕಾರ್ಯಕ್ರಮವಾಗಿದೆ. ಬಿಜೆಪಿ ಪಕ್ಷದ ಕಾರ್ಯಕ್ರಮವಲ್ಲ ಎಂದು ಸ್ಪಷ್ಟಪಡಿಸಿದರು. ಎಲ್ಲಾ ಪಕ್ಷಗಳ ಸಂಸದರು ಬೆಳಿಗ್ಗೆ 8.30ಕ್ಕೆ ಈ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಅವರು ಕೋರಿದರು.

ಭಾರತದ 75ನೇ ಸ್ವಾತಂತ್ರ್ಯೋತ್ಸವದಅಂಗವಾಗಿ ಆಗಸ್ಟ್ 9 ರಿಂದ ಪ್ರಾರಂಭವಾಗಿ ಆಗಸ್ಟ್ 15 ರವರೆಗೆ ಒಂದು ವಾರದ ವರೆಗೆ ನಡೆಯುವ ಕಾರ್ಯಕ್ರಮಗಳ ಕುರಿತು ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಪಕ್ಷದ ಮುಖಂಡರಿಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT