‘25 ಹೆಕ್ಟೇರ್ ಪ್ರದೇಶದಲ್ಲಿ ಯಾತ್ರಿಗಳ ಭವನ, ವೇದ ಪಾಠ ಶಾಲೆ, ಆಧ್ಮಾತಿಕ– ಧ್ಯಾನ ಕೇಂದ್ರ, ಕಚೇರಿ, ಪಾರ್ಕಿಂಗ್ ಸೌಕರ್ಯ ಕಲ್ಪಿಸಲಾಗುವುದು. ಭವಿಷ್ಯದಲ್ಲಿ ವೈದ್ಯಕೀಯ ಮತ್ತು ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲಾಗುವುದು. ದೇವಸ್ಥಾನದ ನಿರ್ಮಾಣದಿಂದಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರಕುವ ಜೊತೆಗೆ ಆರ್ಥಿಕ ಚಟುವಟಿಕೆಗಳಿಗೆ ಪುಷ್ಟಿ ದೊರಕುತ್ತದೆ’ ಎಂದು ಟಿಟಿಡಿ ವಕ್ತಾರರು ತಿಳಿಸಿದ್ದಾರೆ.