ನವದೆಹಲಿ: ಪಶ್ಷಿಮ ಬಂಗಾಳದ ಮೊದಲ ನಾಲ್ಕು ಹಂತಗಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಒಡೆದುಹೋಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶವಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಆಸಾನ್ಸೋಲ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಮತದಾನದ ಕೊನೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯನಿಗೆ ಸೋಲಾಗಲಿದೆ ಎಂದಿದ್ದಾರೆ.
ಶವಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವ ಹಳೆಯ ಚಾಳಿಯನ್ನು ಟಿಎಂಸಿ ಮುಖ್ಯಸ್ಥೆ ಈಗ ಮುಂದುವರಿಸಿದ್ದಾರೆ. ಕೂಚ್ ಬಿಹಾರ್ ಜಿಲ್ಲೆಯ ಸೀತಾಲಕುಚಿಯಲ್ಲಿ ದುರದೃಷ್ಟವಶಾತ್ ಮೃತಪಟ್ಟ ಐವರ ಸಾವಿಗೆ ರಾಜಕೀಯ ಬಣ್ಣ ಬಳಿಯಲು ಮಮತಾ ಯತ್ನಿಸುತ್ತಿದ್ದಾರೆ ಎಂದು ಮೋದಿ ದೂರಿದ್ದಾರೆ.
ನಾಲ್ಕು ಹಂತಗಳ ಮತದಾನದ ಬಳಿಕ ಟಿಎಂಸಿ ಒಡೆದುಹೋಗಿದೆ. 8 ಹಂತಗಳ ಮತದಾನ ಪೂರ್ಣಗೊಂಡ ಬಳಿಕ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಅವರು ಹೇಳಿದ್ದಾರೆ.