‘ರ್ಯಾಲಿಗಳಲ್ಲಿ ಅಂಥ ಘೋಷಣೆಗಳನ್ನು ಕೂಗಬಾರದು. ಅಂತಹ ಘೋಷಣೆ ಕೂಗಿದ್ದು ಸರಿಯಲ್ಲ. ‘ಗೋಲಿ ಮಾರೋ’ ಎಂಬುದನ್ನು ಕೇವಲ ಆ ಪದದ ಅರ್ಥವಾಗಿಯಷ್ಟೇ ಗಣನೆಗೆ ತೆಗೆದುಕೊಳ್ಳಬಾರದು’ ಎಂದೂ ಅವರು ಹೇಳಿದ್ದಾರೆ.
ದಕ್ಷಿಣ ಕೋಲ್ಕತ್ತದಲ್ಲಿ ಮಂಗಳವಾರ ನಡೆದ ‘ಶಾಂತಿ ರ್ಯಾಲಿ’ಯಲ್ಲಿ ಕೆಲವು ಟಿಎಂಸಿ ಬೆಂಬಲಿಗರು ಘೋಷಣೆ ಕೂಗಿದ್ದರು. ರ್ಯಾಲಿಯಲ್ಲಿ ಟಿಎಂಸಿ ಸರ್ಕಾರದ ಇಬ್ಬರು ಸಚಿವರೂ ಭಾಗವಹಿಸಿದ್ದರು.
2020ರ ಜನವರಿಯಲ್ಲಿ ದೆಹಲಿಯಲ್ಲಿ ಬಿಜೆಪಿ ನಾಯಕರೊಬ್ಬರು ಇಂಥದ್ದೇ (ದೇಶದ್ರೋಹಿಗಳಿಗೆ ಗುಂಡಿಕ್ಕಿ) ಘೋಷಣೆ ಕೂಗಿದ್ದು ದೇಶದಾದ್ಯಂತ ಆಕ್ಷೇಪಕ್ಕೆ ಗುರಿಯಾಗಿತ್ತು. ಇತರ ಪ್ರತಿಪಕ್ಷಗಳ ಜತೆಗೆ ಟಿಎಂಸಿಯು ಘೋಷಣೆಯನ್ನು ತೀವ್ರವಾಗಿ ಖಂಡಿಸಿತ್ತು.