<p><strong>ಕೊಲ್ಕತ್ತಾ: </strong>ಅಸಮಾಧಾನಿತ ಶಾಸಕಿ ವೈಶಾಲಿ ದಾಲ್ಮಿಯಾ ಅವರನ್ನು ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಪಕ್ಷವು ಗುರುವಾರ ಪಕ್ಷದಿಂದ ಹೊರದಬ್ಬಿದೆ.</p>.<p>ಬ್ಯಾಲಿ ವಿಧಾನಸಭೆ ಕ್ಷೇತ್ರದ ಶಾಸಕಿಯಾದ ವೈಶಾಲಿ, ಟಿಎಂಸಿಯ ಕೆಲ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದರು. ಪಕ್ಷದಲ್ಲಿ ಪ್ರಾಮಾಣಿಕತೆಗೆ ಮತ್ತು ಪ್ರಾಮಾಣಿಕರಿಗೆ ಸ್ಥಾನವಿಲ್ಲ ಎಂದೂ ಅವರು ಹೇಳಿದ್ದರು.</p>.<p>ಟಿಎಂಸಿ ಶಿಸ್ತು ಸಮಿತಿ ಶುಕ್ರವಾರ ಸಭೆ ಸೇರಿ ದಾಲ್ಮಿಯಾ ಅವರನ್ನು ಪಕ್ಷದಿಂದ ಹೊರಹಾಕಲು ನಿರ್ಧರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.</p>.<p>ಟಿಎಂಸಿಯ ಹಿರಿಯ ಮುಖಂಡ ರಾಜೀವ್ ಬ್ಯಾನರ್ಜಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ವೈಶಾಲಿ ಅವರನ್ನು ಉಚ್ಚಾಟಿಸಲಾಗಿದೆ. ಬ್ಯಾನರ್ಜಿ ರಾಜೀನಾಮೆಗೆ ವೈಶಾಲಿ ಅವರು ಪಕ್ಷದ ನಾಯಕತ್ವದ ವಿರುದ್ಧ ದನಿಯೇರಿಸಿದ್ದರು.</p>.<p>ಪಕ್ಷ ತೊರೆಯುತ್ತಿರುವವರು ಮತ್ತು ಪಕ್ಷದ ವಿರುದ್ಧ ಅಸಮಾಧಾನ ಹೊಂದಿರುವವರಿಂದಾಗಿ ಆಡಳಿತಾರೂಢ ಟಿಎಂಸಿ ಸದ್ಯ ರಾಜಕೀಯದ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಕತ್ತಾ: </strong>ಅಸಮಾಧಾನಿತ ಶಾಸಕಿ ವೈಶಾಲಿ ದಾಲ್ಮಿಯಾ ಅವರನ್ನು ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಪಕ್ಷವು ಗುರುವಾರ ಪಕ್ಷದಿಂದ ಹೊರದಬ್ಬಿದೆ.</p>.<p>ಬ್ಯಾಲಿ ವಿಧಾನಸಭೆ ಕ್ಷೇತ್ರದ ಶಾಸಕಿಯಾದ ವೈಶಾಲಿ, ಟಿಎಂಸಿಯ ಕೆಲ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದರು. ಪಕ್ಷದಲ್ಲಿ ಪ್ರಾಮಾಣಿಕತೆಗೆ ಮತ್ತು ಪ್ರಾಮಾಣಿಕರಿಗೆ ಸ್ಥಾನವಿಲ್ಲ ಎಂದೂ ಅವರು ಹೇಳಿದ್ದರು.</p>.<p>ಟಿಎಂಸಿ ಶಿಸ್ತು ಸಮಿತಿ ಶುಕ್ರವಾರ ಸಭೆ ಸೇರಿ ದಾಲ್ಮಿಯಾ ಅವರನ್ನು ಪಕ್ಷದಿಂದ ಹೊರಹಾಕಲು ನಿರ್ಧರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.</p>.<p>ಟಿಎಂಸಿಯ ಹಿರಿಯ ಮುಖಂಡ ರಾಜೀವ್ ಬ್ಯಾನರ್ಜಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ವೈಶಾಲಿ ಅವರನ್ನು ಉಚ್ಚಾಟಿಸಲಾಗಿದೆ. ಬ್ಯಾನರ್ಜಿ ರಾಜೀನಾಮೆಗೆ ವೈಶಾಲಿ ಅವರು ಪಕ್ಷದ ನಾಯಕತ್ವದ ವಿರುದ್ಧ ದನಿಯೇರಿಸಿದ್ದರು.</p>.<p>ಪಕ್ಷ ತೊರೆಯುತ್ತಿರುವವರು ಮತ್ತು ಪಕ್ಷದ ವಿರುದ್ಧ ಅಸಮಾಧಾನ ಹೊಂದಿರುವವರಿಂದಾಗಿ ಆಡಳಿತಾರೂಢ ಟಿಎಂಸಿ ಸದ್ಯ ರಾಜಕೀಯದ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>