ಸೇನ್ ಹೇಳಿಕೆಯನ್ನು ಬೆಂಬಲಿಸಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, 'ಯಾತ್ರೆಯ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಕಾರ್ಯಕ್ರಮ ನಡೆಸುತ್ತಿದೆ. ಅದರ ಬಗ್ಗೆ ನಾವು ಹೇಳುವುದೇನೂ ಇಲ್ಲ. ಇದು ಬಿಜೆಪಿ ವಿರೋಧಿ ಕಾರ್ಯಕ್ರಮ. ಅದಕ್ಕೆ ಅವರು ಪ್ರತಿಕ್ರಿಯಿಸಬೇಕು. ಯಾತ್ರೆಯಲ್ಲಿ ಸಾಕಷ್ಟು ಧನಾತ್ಮಕ ಮತ್ತು ಋಣಾತ್ಮಕ ಅಂಶಗಳಿವೆ' ಎಂದಿದ್ದಾರೆ.