<p><strong>ಕೋಲ್ಕತ್ತ: </strong>ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕರ್ ಅವರು ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದು, ಕೂಡಲೇ ಅವರನ್ನು ತೆಗೆಯಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ತೃಣಮೂಲ ಕಾಂಗ್ರೆಸ್ ಮನವಿ ಮಾಡಿದೆ.</p>.<p>‘ಜಗದೀಪ್ ಧನ್ಕರ್ ಅವರು ರಾಜ್ಯ ಸರ್ಕಾರದ ವಿರುದ್ಧ ನಿಯಮಿತವಾಗಿ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಈ ಮೂಲಕ ಸಾಂವಿಧಾನಿಕ ಮಿತಿಗಳನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ಅವರನ್ನು ರಾಜ್ಯಪಾಲರ ಹುದ್ದೆಯಿಂದ ಕೆಳಗಿಳಿಸಬೇಕು’ ಎಂದು ಟಿಎಂಸಿ ಮನವಿ ಮಾಡಿದೆ.</p>.<p>‘ರಾಜ್ಯಪಾಲರು ಸಾಂವಿಧಾನಿಕವಾಗಿ ಕೆಲಸ ಮಾಡುತ್ತಿದ್ದಾರೆ. ಇದು ಟಿಎಂಸಿಯಲ್ಲಿ ಭಯ ಮೂಡಿಸಿದೆ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.</p>.<p>‘ಟಿಎಂಸಿ ಸಂಸದರ ತಂಡವು ರಾಷ್ಟ್ರಪತಿ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದು, ರಾಜ್ಯಪಾಲರು ಮಾಡಿರುವ ಸಾಂವಿಧಾನಿಕ ಉಲ್ಲಂಘನೆ ಬಗ್ಗೆ ಹೇಳಲಾಗಿದೆ. ಅಲ್ಲದೆ ಅವರ ವಿರುದ್ಧ ಸಂವಿಧಾನದ 156(1) ವಿಧಿ ಅನುಸಾರ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿದೆ’ ಎಂದು ಸಂಸದ ಸುಕೇಂದು ಶೇಖರ್ ರಾಯ್ ಅವರು ವರದಿಗಾರರಿಗೆ ತಿಳಿಸಿದರು.</p>.<p>‘ಧನ್ಕರ್ ಅವರು ಜುಲೈ ತಿಂಗಳಿನಲ್ಲಿ ಅಧಿಕಾರ ವಹಿಸಿಕೊಂಡ ದಿನದಿಂದ ಸರ್ಕಾರದ ಆಡಳಿತ, ಸಚಿವರು, ಅಧಿಕಾರಿಗಳ ವಿರುದ್ಧ ಟ್ವಿಟರ್ ಹಾಗೂ ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಅವರು ಹಲವು ನಿಯಮಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕರ್ ಅವರು ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದು, ಕೂಡಲೇ ಅವರನ್ನು ತೆಗೆಯಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ತೃಣಮೂಲ ಕಾಂಗ್ರೆಸ್ ಮನವಿ ಮಾಡಿದೆ.</p>.<p>‘ಜಗದೀಪ್ ಧನ್ಕರ್ ಅವರು ರಾಜ್ಯ ಸರ್ಕಾರದ ವಿರುದ್ಧ ನಿಯಮಿತವಾಗಿ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಈ ಮೂಲಕ ಸಾಂವಿಧಾನಿಕ ಮಿತಿಗಳನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ಅವರನ್ನು ರಾಜ್ಯಪಾಲರ ಹುದ್ದೆಯಿಂದ ಕೆಳಗಿಳಿಸಬೇಕು’ ಎಂದು ಟಿಎಂಸಿ ಮನವಿ ಮಾಡಿದೆ.</p>.<p>‘ರಾಜ್ಯಪಾಲರು ಸಾಂವಿಧಾನಿಕವಾಗಿ ಕೆಲಸ ಮಾಡುತ್ತಿದ್ದಾರೆ. ಇದು ಟಿಎಂಸಿಯಲ್ಲಿ ಭಯ ಮೂಡಿಸಿದೆ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.</p>.<p>‘ಟಿಎಂಸಿ ಸಂಸದರ ತಂಡವು ರಾಷ್ಟ್ರಪತಿ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದು, ರಾಜ್ಯಪಾಲರು ಮಾಡಿರುವ ಸಾಂವಿಧಾನಿಕ ಉಲ್ಲಂಘನೆ ಬಗ್ಗೆ ಹೇಳಲಾಗಿದೆ. ಅಲ್ಲದೆ ಅವರ ವಿರುದ್ಧ ಸಂವಿಧಾನದ 156(1) ವಿಧಿ ಅನುಸಾರ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿದೆ’ ಎಂದು ಸಂಸದ ಸುಕೇಂದು ಶೇಖರ್ ರಾಯ್ ಅವರು ವರದಿಗಾರರಿಗೆ ತಿಳಿಸಿದರು.</p>.<p>‘ಧನ್ಕರ್ ಅವರು ಜುಲೈ ತಿಂಗಳಿನಲ್ಲಿ ಅಧಿಕಾರ ವಹಿಸಿಕೊಂಡ ದಿನದಿಂದ ಸರ್ಕಾರದ ಆಡಳಿತ, ಸಚಿವರು, ಅಧಿಕಾರಿಗಳ ವಿರುದ್ಧ ಟ್ವಿಟರ್ ಹಾಗೂ ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಅವರು ಹಲವು ನಿಯಮಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>