ಬಿಎಸ್ಎಫ್ ಯೋಧರು ಪ್ರೇಮ್ ಕುಮಾರ್ನನ್ನು ಹತ್ಯೆ ಮಾಡಿದ್ದು ಯಾಕೆ? ಎಂದು ಅಭಿಷೇಕ್ ಬ್ಯಾನರ್ಜಿ ಪ್ರಶ್ನೆ ಮಾಡಿದ್ದಾರೆ. ನಾವು ನಿಮಗೆ 48 ಗಂಟೆಗಳ ಸಮಯ ಕೊಡುತ್ತೇವೆ, ಅಷ್ಟರೊಳಗೆ ಕೇಂದ್ರ ಸರ್ಕಾರ, ಬಿಎಸ್ಎಫ್ ಅಧಿಕಾರಿಗಳು ಹಾಗೂ ಗೃಹ ಸಚಿವ ಅಮಿತ್ ಶಾ ಈ ಘಟನೆ ಬಗ್ಗೆ ಸ್ಪಷ್ಟನೆ ನೀಡಬೇಕು ಅಥವಾ ಈ ಭಾಗದ ಜನರ ಕ್ಷೇಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.