ರಾಜ್ಯಸಭೆಯಲ್ಲಿ ಗುರುವಾರ ನಡೆದ ಕಲಾಪದಲ್ಲಿ ಶಂತನು ಸೇನ್ ಅವರು ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಚಿವ ಅಶ್ವಿನಿ ವೈಷ್ಣವ್ ಅವರ ಕೈಯಲ್ಲಿದ್ದ ಹೇಳಿಕೆಯ ಪ್ರತಿಯನ್ನು ಕಿತ್ತುಕೊಂಡಿದ್ದರು. ನಂತರ ಬಾವಿಗಿಳಿದು ಅದನ್ನು ಹರಿದು ಬಿಸಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಧಿವೇಶನದಿಂದ ಅಮಾನತು ಮಾಡಬೇಕೆಂದು ಸರ್ಕಾರ ನಿರ್ಣಯ ಮಂಡಿಸಿತ್ತು.