<p><strong>ನವದೆಹಲಿ:</strong> ತೃಣಮೂಲ ಕಾಂಗ್ರೆಸ್ ಸಂಸದ ಶಂತನು ಸೇನ್ ಅವರನ್ನು ಶುಕ್ರವಾರದಿಂದ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.</p>.<p>ಶಂತನು ಸೇನ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯಸಭೆಯಲ್ಲಿಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಮಂಡಿಸಿದ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ನಂತರ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅವರು ಸದನವನ್ನು ತೊರೆಯುವಂತೆ ಸೇನ್ ಅವರನ್ನು ಕೇಳಿದರು.</p>.<p>ರಾಜ್ಯಸಭೆಯಲ್ಲಿ ಗುರುವಾರ ನಡೆದ ಕಲಾಪದಲ್ಲಿ ಶಂತನು ಸೇನ್ ಅವರು ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಚಿವ ಅಶ್ವಿನಿ ವೈಷ್ಣವ್ ಅವರ ಕೈಯಲ್ಲಿದ್ದ ಹೇಳಿಕೆಯ ಪ್ರತಿಯನ್ನು ಕಿತ್ತುಕೊಂಡಿದ್ದರು. ನಂತರ ಬಾವಿಗಿಳಿದು ಅದನ್ನು ಹರಿದು ಬಿಸಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಧಿವೇಶನದಿಂದ ಅಮಾನತು ಮಾಡಬೇಕೆಂದು ಸರ್ಕಾರ ನಿರ್ಣಯ ಮಂಡಿಸಿತ್ತು.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/lok-sabha-adjourns-for-the-day-amid-opposition-uproar-850867.html">ಲೋಕಸಭೆ ಕಲಾಪ: ಜು.26ರ ವರೆಗೂ ಮುಂದೂಡಿಕೆ </a></p>.<p>ಶುಕ್ರವಾರದ ಕಲಾಪದ ಚರ್ಚೆಯ ವಿಷಯಗಳ ಪಟ್ಟಿಯಲ್ಲಿ ನಿರ್ಣಯ ಕುರಿತು ಪ್ರಸ್ತಾಪಿಸದೇ ಏಕಾಏಕಿ ಅನುಮೋದನೆ ನೀಡಲಾಗಿದೆ ಎಂದು ಆರೋಪಿಸಿ ಟಿಎಂಸಿ ಸಂಸದರು ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತೃಣಮೂಲ ಕಾಂಗ್ರೆಸ್ ಸಂಸದ ಶಂತನು ಸೇನ್ ಅವರನ್ನು ಶುಕ್ರವಾರದಿಂದ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.</p>.<p>ಶಂತನು ಸೇನ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯಸಭೆಯಲ್ಲಿಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಮಂಡಿಸಿದ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ನಂತರ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅವರು ಸದನವನ್ನು ತೊರೆಯುವಂತೆ ಸೇನ್ ಅವರನ್ನು ಕೇಳಿದರು.</p>.<p>ರಾಜ್ಯಸಭೆಯಲ್ಲಿ ಗುರುವಾರ ನಡೆದ ಕಲಾಪದಲ್ಲಿ ಶಂತನು ಸೇನ್ ಅವರು ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಚಿವ ಅಶ್ವಿನಿ ವೈಷ್ಣವ್ ಅವರ ಕೈಯಲ್ಲಿದ್ದ ಹೇಳಿಕೆಯ ಪ್ರತಿಯನ್ನು ಕಿತ್ತುಕೊಂಡಿದ್ದರು. ನಂತರ ಬಾವಿಗಿಳಿದು ಅದನ್ನು ಹರಿದು ಬಿಸಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಧಿವೇಶನದಿಂದ ಅಮಾನತು ಮಾಡಬೇಕೆಂದು ಸರ್ಕಾರ ನಿರ್ಣಯ ಮಂಡಿಸಿತ್ತು.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/lok-sabha-adjourns-for-the-day-amid-opposition-uproar-850867.html">ಲೋಕಸಭೆ ಕಲಾಪ: ಜು.26ರ ವರೆಗೂ ಮುಂದೂಡಿಕೆ </a></p>.<p>ಶುಕ್ರವಾರದ ಕಲಾಪದ ಚರ್ಚೆಯ ವಿಷಯಗಳ ಪಟ್ಟಿಯಲ್ಲಿ ನಿರ್ಣಯ ಕುರಿತು ಪ್ರಸ್ತಾಪಿಸದೇ ಏಕಾಏಕಿ ಅನುಮೋದನೆ ನೀಡಲಾಗಿದೆ ಎಂದು ಆರೋಪಿಸಿ ಟಿಎಂಸಿ ಸಂಸದರು ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>