ಬೆಂಗಳೂರು: ಕಾಳಿ ಮಾತೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರಿಂದ ಪಕ್ಷ ಅಂತರ ಕಾಯ್ದುಕೊಂಡಿದೆ.
ಕಾಳಿ ಮಾತೆ ಮಾಂಸ ತಿನ್ನುವ ಮತ್ತು ಮದ್ಯ ಸೇವಿಸುವ ಕುರಿತು ಮಹುವಾ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಲೇ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಲ್ಲದೆ, ದೇಶದ ವಿವಿಧೆಡೆ ಪ್ರತಿಭಟನೆ ಕೂಡ ನಡೆದಿದ್ದು, ಕ್ಷಮೆಯಾಚನೆ ಮತ್ತು ಸೂಕ್ತ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ, ಯಾವುದೇ ಹೇಳಿಕೆ ನೀಡದೆ ಅಂತರ ಕಾಯ್ದುಕೊಂಡಿದೆ.