ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಳಿ ಮಾತೆ ಕುರಿತು ವಿವಾದಿತ ಹೇಳಿಕೆ: ಮಹುವಾರಿಂದ ಅಂತರ ಕಾಯ್ದುಕೊಂಡ ಟಿಎಂಸಿ

ಅಕ್ಷರ ಗಾತ್ರ

ಬೆಂಗಳೂರು: ಕಾಳಿ ಮಾತೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರಿಂದ ಪಕ್ಷ ಅಂತರ ಕಾಯ್ದುಕೊಂಡಿದೆ.

ಕಾಳಿ ಮಾತೆ ಮಾಂಸ ತಿನ್ನುವ ಮತ್ತು ಮದ್ಯ ಸೇವಿಸುವ ಕುರಿತು ಮಹುವಾ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಲೇ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅಲ್ಲದೆ, ದೇಶದ ವಿವಿಧೆಡೆ ಪ್ರತಿಭಟನೆ ಕೂಡ ನಡೆದಿದ್ದು, ಕ್ಷಮೆಯಾಚನೆ ಮತ್ತು ಸೂಕ್ತ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ, ಯಾವುದೇ ಹೇಳಿಕೆ ನೀಡದೆ ಅಂತರ ಕಾಯ್ದುಕೊಂಡಿದೆ.

ಆದರೆ, ಮಹುವಾ ಮೊಯಿತ್ರಾ ತಮ್ಮ ಹೇಳಿಕೆಗೆ ಬದ್ಧವಾಗಿದ್ದು, ಅದನ್ನೇ ಪುನರುಚ್ಚರಿಸುತ್ತೇನೆ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT