ಕೋಲ್ಕತ್ತ: ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಎದುರು ನಂದಿಗ್ರಾಮದಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರ ಹೆಸರು ಹಲ್ದಿಯಾ ಮತ್ತು ನಂದಿಗ್ರಾಮ ಎರಡೂ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ‘ಇರುವಂತೆ ತೋರುತ್ತಿದೆ’. ಹಾಗಾಗಿ, ಅವರ ನಾಮಪತ್ರವನ್ನು ವಜಾ ಮಾಡಬೇಕು ಎಂದು ಚುನಾವಣಾ ಆಯೋಗವನ್ನು ಟಿಎಂಸಿ ಒತ್ತಾಯಿಸಿದೆ. ಮಮತಾ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಅವರ ಒಂದು ಕಾಲದ ಪರಮಾಪ್ತ ಸುವೇಂದು ಇತ್ತೀಚೆಗೆ ಆಗ್ರಹಿಸಿದ್ದರು.