<p><strong>ಕೋಲ್ಕತ್ತ: </strong>ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಟೀಕಿಸಿದ್ದಾರೆ.</p>.<p>ಕೇಸರಿ ಪಕ್ಷದ ವಿರುದ್ಧ ಒಗ್ಗಟ್ಟು ಮೂಡಿಸುತ್ತಿರುವುದಾಗಿ ಟಿಎಂಸಿ ಹೇಳುತ್ತಿರುವುದು ಕೇವಲ ನಾಟಕ. ಬಿಜೆಪಿ ಜತೆ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಅನ್ನು ಮುಗಿಸಲು ಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ಮುಂದಿನ ತಿಂಗಳು ನಡೆಯಲಿರುವ ಗೋವಾ ಚುನಾವಣೆಗೆ ಟಿಎಂಸಿಯು ಇತ್ತೀಚೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಗೋವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ‘ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷದ (ಎಂಜಿಪಿ) ಜತೆ ಮೈತ್ರಿ ಮಾಡಿಕೊಂಡಿದೆ.</p>.<p><a href="https://www.prajavani.net/india-news/goa-assembly-elections-manohar-parrikar-son-bjp-aap-kejriwal-903661.html" itemprop="url">Goa Elections: ಬಿಜೆಪಿ ಪಟ್ಟಿಯಲ್ಲಿ ಪರಿಕ್ಕರ್ ಪುತ್ರನಿಗಿಲ್ಲ ಜಾಗ </a></p>.<p>‘ಬಿಜೆಪಿಯೇತರ ಮತಗಳನ್ನು ವಿಭಜಿಸುವುದು ಟಿಎಂಸಿಯ ಮುಖ್ಯ ಪಾತ್ರವಾಗಿದೆ. ಟಿಎಂಸಿಯು ಹಣಬಲ ಉಪಯೋಗಿಸಿಕೊಂಡು ಕೆಲವು ನಾಯಕರನ್ನು ಕರೆತಂದಿದೆ. ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ಕಾಂಗ್ರೆಸ್ಗೆ ತೊಂದರೆ ಉಂಟುಮಾಡಲು ಯತ್ನಿಸುತ್ತಿದೆ. ಇದು ಸಾಬೀತಾಗಿರುವ ಸತ್ಯ’ ಎಂದು ಚೌಧರಿ ಹೇಳಿದ್ದಾರೆ.</p>.<p>‘ಬಿಜೆಪಿಯ ಪ್ರಮುಖ ಪ್ರತಿಪಕ್ಷವಾಗಿ ಕಾಂಗ್ರೆಸ್ ಇರುವ ರಾಜ್ಯಗಳಲ್ಲೇ ಟಿಎಂಸಿ ಈ ರೀತಿ ಮಾಡುತ್ತಿದೆ. ಇತರ ಪ್ರಾದೇಶಿಕ ಶಕ್ತಿಗಳು ಇರುವುದರಿಂದ ಉತ್ತರ ಪ್ರದೇಶದಂಥ ರಾಜ್ಯಗಳಲ್ಲಿ ಸ್ಪರ್ಧಿಸುತ್ತಿಲ್ಲ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಟೀಕಿಸಿದ್ದಾರೆ.</p>.<p>ಕೇಸರಿ ಪಕ್ಷದ ವಿರುದ್ಧ ಒಗ್ಗಟ್ಟು ಮೂಡಿಸುತ್ತಿರುವುದಾಗಿ ಟಿಎಂಸಿ ಹೇಳುತ್ತಿರುವುದು ಕೇವಲ ನಾಟಕ. ಬಿಜೆಪಿ ಜತೆ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಅನ್ನು ಮುಗಿಸಲು ಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ಮುಂದಿನ ತಿಂಗಳು ನಡೆಯಲಿರುವ ಗೋವಾ ಚುನಾವಣೆಗೆ ಟಿಎಂಸಿಯು ಇತ್ತೀಚೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಗೋವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ‘ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷದ (ಎಂಜಿಪಿ) ಜತೆ ಮೈತ್ರಿ ಮಾಡಿಕೊಂಡಿದೆ.</p>.<p><a href="https://www.prajavani.net/india-news/goa-assembly-elections-manohar-parrikar-son-bjp-aap-kejriwal-903661.html" itemprop="url">Goa Elections: ಬಿಜೆಪಿ ಪಟ್ಟಿಯಲ್ಲಿ ಪರಿಕ್ಕರ್ ಪುತ್ರನಿಗಿಲ್ಲ ಜಾಗ </a></p>.<p>‘ಬಿಜೆಪಿಯೇತರ ಮತಗಳನ್ನು ವಿಭಜಿಸುವುದು ಟಿಎಂಸಿಯ ಮುಖ್ಯ ಪಾತ್ರವಾಗಿದೆ. ಟಿಎಂಸಿಯು ಹಣಬಲ ಉಪಯೋಗಿಸಿಕೊಂಡು ಕೆಲವು ನಾಯಕರನ್ನು ಕರೆತಂದಿದೆ. ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ಕಾಂಗ್ರೆಸ್ಗೆ ತೊಂದರೆ ಉಂಟುಮಾಡಲು ಯತ್ನಿಸುತ್ತಿದೆ. ಇದು ಸಾಬೀತಾಗಿರುವ ಸತ್ಯ’ ಎಂದು ಚೌಧರಿ ಹೇಳಿದ್ದಾರೆ.</p>.<p>‘ಬಿಜೆಪಿಯ ಪ್ರಮುಖ ಪ್ರತಿಪಕ್ಷವಾಗಿ ಕಾಂಗ್ರೆಸ್ ಇರುವ ರಾಜ್ಯಗಳಲ್ಲೇ ಟಿಎಂಸಿ ಈ ರೀತಿ ಮಾಡುತ್ತಿದೆ. ಇತರ ಪ್ರಾದೇಶಿಕ ಶಕ್ತಿಗಳು ಇರುವುದರಿಂದ ಉತ್ತರ ಪ್ರದೇಶದಂಥ ರಾಜ್ಯಗಳಲ್ಲಿ ಸ್ಪರ್ಧಿಸುತ್ತಿಲ್ಲ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>