<p><strong>ಕೋಲ್ಕತಾ: </strong>ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗುರುವಾರ ರಾಜ್ಯದಾದ್ಯಂತಪ್ರತಿಭಟನೆ ನಡೆಸಿದರು.</p>.<p>ಕೋಲ್ಕತಾ ನಗರದ ವಿವಿಧ ಭಾಗಗಳು ಸೇರಿದಂತೆ, ರಾಜ್ಯದ ಉತ್ತರ 24 ಪರಗಣ, ಹೂಗ್ಲಿ, ಹೌರಾ, ಬೀರ್ಭಮ್, ದಕ್ಷಿಣ 24 ಪರಗಣಗಳು, ಜಲ್ಪೈಗುರಿ ಜಿಲ್ಲೆಗಳಲ್ಲಿ ಕಾರ್ಯಕರ್ತರು ಪ್ರತಿಭಟನೆ ಜತೆಗೆ ಕೆಲವು ಕಡೆ ರಸ್ತೆ ತಡೆ ನಡೆಸಿದರು.</p>.<p>ಪ್ರತಿಭಟನೆ ವೇಳೆ ಮಮತಾ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.</p>.<p>ಮಮತಾ ಅವರ ಮೇಲೆ ದಾಳಿ ನಡೆದ ನಂದಿಗ್ರಾಮದ ಬರುಲಿಯಾ ಬಜಾರ್ನಲ್ಲಿ ಕಾರ್ಯಕರ್ತರು ಟೈರ್ ಸುಟ್ಟು ಪ್ರತಿಭಟನೆ ನಡೆಸಿದರು.</p>.<p>ಇದಕ್ಕೂ ಮುನ್ನ ಬರುಲಿಯಾ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆಯಿತು. ‘ತಕ್ಷಣವೇ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು‘ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮಮತಾ ಅವರು ಶೀಘ್ರ ಚೇತರಿಸಲಿ ಎಂದು ಹಾರೈಸಿ ನಂದಿಗ್ರಾಮದ ಪಿರ್ಬಾಬದ ವಿವಿಧ ದೇವಾಲಯಗಳಲ್ಲಿ ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತಾ: </strong>ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗುರುವಾರ ರಾಜ್ಯದಾದ್ಯಂತಪ್ರತಿಭಟನೆ ನಡೆಸಿದರು.</p>.<p>ಕೋಲ್ಕತಾ ನಗರದ ವಿವಿಧ ಭಾಗಗಳು ಸೇರಿದಂತೆ, ರಾಜ್ಯದ ಉತ್ತರ 24 ಪರಗಣ, ಹೂಗ್ಲಿ, ಹೌರಾ, ಬೀರ್ಭಮ್, ದಕ್ಷಿಣ 24 ಪರಗಣಗಳು, ಜಲ್ಪೈಗುರಿ ಜಿಲ್ಲೆಗಳಲ್ಲಿ ಕಾರ್ಯಕರ್ತರು ಪ್ರತಿಭಟನೆ ಜತೆಗೆ ಕೆಲವು ಕಡೆ ರಸ್ತೆ ತಡೆ ನಡೆಸಿದರು.</p>.<p>ಪ್ರತಿಭಟನೆ ವೇಳೆ ಮಮತಾ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.</p>.<p>ಮಮತಾ ಅವರ ಮೇಲೆ ದಾಳಿ ನಡೆದ ನಂದಿಗ್ರಾಮದ ಬರುಲಿಯಾ ಬಜಾರ್ನಲ್ಲಿ ಕಾರ್ಯಕರ್ತರು ಟೈರ್ ಸುಟ್ಟು ಪ್ರತಿಭಟನೆ ನಡೆಸಿದರು.</p>.<p>ಇದಕ್ಕೂ ಮುನ್ನ ಬರುಲಿಯಾ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆಯಿತು. ‘ತಕ್ಷಣವೇ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು‘ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮಮತಾ ಅವರು ಶೀಘ್ರ ಚೇತರಿಸಲಿ ಎಂದು ಹಾರೈಸಿ ನಂದಿಗ್ರಾಮದ ಪಿರ್ಬಾಬದ ವಿವಿಧ ದೇವಾಲಯಗಳಲ್ಲಿ ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>