<p class="title"><strong>ಚೆನ್ನೈ: </strong>‘ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡಬಾರದು’ ಎಂದು ತಮಿಳುನಾಡಿನ ಸರ್ವಪಕ್ಷಗಳ ಸಭೆ ಕೇಂದ್ರ ಸರ್ಕಾರವನ್ನು ಆಗ್ರಹಪಡಿಸಿದ್ದು, ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.</p>.<p class="title">ಯೋಜನೆ ಕುರಿತ ಚರ್ಚೆಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೋಮವಾರ ಕರೆದಿದ್ದ ಸಭೆಯಲ್ಲಿ 13 ಪಕ್ಷಗಳ ಮುಖಂಡರು ಒಮ್ಮತದ ನಿಲುವು ವ್ಯಕ್ತಪಡಿಸಿದ್ದು, ‘ಯೋಜನೆಯನ್ನು ತಡೆಯಲು ಸರ್ಕಾರಕ್ಕೆ ಸಹಕಾರ, ಬೆಂಬಲ ನೀಡಲಿದ್ದೇವೆ’ ಎಂದರು.</p>.<p>ಕರ್ನಾಟಕ ಸರ್ಕಾರ ಯೋಜನೆಯನ್ನು ಜಾರಿಗೊಳಿಸದಂತೆ ತಡೆಯಲು ಸುಪ್ರೀಂ ಕೋರ್ಟ್ನ ಮೆಟ್ಟಿಲೇರುವುದು ಒಳಗೊಂಡಂತೆ ಎಲ್ಲ ರೀತಿಯ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲೂ ಸಭೆಯು ತೀರ್ಮಾನಿಸಿತು.</p>.<p>ತಮಿಳುನಾಡು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲು ನವದೆಹಲಿಗೆ ಸರ್ವಪಕ್ಷಗಳ ನಿಯೋಗವು ತೆರಳಿ ನಿರ್ಣಯದ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ನೀಡಲು ನಿರ್ಧರಿಸಿತು.</p>.<p>ಸಭೆಯು ಸುಮಾರು ಎರಡು ಗಂಟೆ ನಡೆದಿದ್ದು, ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಟಾಲಿನ್ ಅವರು, ‘ಕರ್ನಾಟಕ ಸರ್ಕಾರ ಉದ್ದೇಶಿಸಿದಂತೆ ಅಣೆಕಟ್ಟು ನಿರ್ಮಾಣ ಮಾಡಿದರೆ ತಮಿಳುನಾಡು ಸಾಕಷ್ಟು ಕಳೆದುಕೊಳ್ಳಬೇಕಾದಿತು’ ಎಂದು ಹೇಳಿದರು.</p>.<p>‘ಕಾವೇರಿ ನದಿಪಾತ್ರದಲ್ಲಿ ನಿರ್ಮಾಣ ಚಟುವಟಿಕೆ ಕೈಗೊಳ್ಳಬಾರದು ಎಂಬುದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಸ್ಪಷ್ಟವಾಗಿದೆ. ಆದರೂ, ಅಣೆಕಟ್ಟು ನಿರ್ಮಿಸಲು ಕರ್ನಾಟಕ ಮುಂದಾಗಿದೆ. ಇದರಿಂದ ರಾಜ್ಯದ ರೈತರಿಗೆ ಧಕ್ಕೆಯಾಗಲಿದೆ’ ಎಂದರು.</p>.<p>‘ಕರ್ನಾಟಕದ ಈ ಕ್ರಮ ಸಾಂವಿಧಾನಿಕ ಕಾಯ್ದೆಗಳಿಗೆ ಸವಾಲು ಹಾಕುವಂತದ್ದಾಗಿದೆ. ಈ ಕಾರಣದಿಂದ ಕೇಂದ್ರದ ಸಂಬಂಧಿಸಿದ ಸಚಿವಾಲಯಗಳು ಯೋಜನೆಗೆ ಯಾವುದೇ ರೀತಿ ಅನುಮೋದನೆ ನೀಡಬಾರದು’ ಎಂಬ ನಿರ್ಣಯವನ್ನು ಓದಲಾಯಿತು.</p>.<p>ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಮೇಕೆದಾಟು ಯೋಜನೆ ನಿರ್ಮಾಣ ಜಾರಿಗೊಳಿಸಿಯೇ ಸಿದ್ಧ ಎಂದು ಕರ್ನಾಟಕ ಇತ್ತೀಚೆಗೆ ಪ್ರತಿಪಾದಿಸಿತ್ತು.</p>.<p>ಯೋಜನೆಯಿಂದ ತಮಿಳುನಾಡು ರೈತರ ಹಿತಾಸಕ್ತಿಗೆ ಧಕ್ಕೆಯಾಗದು ಎಂಬ ಕರ್ನಾಟಕದ ವಾದವನ್ನು ಸ್ಟಾಲಿನ್ ತಳ್ಳಿಹಾಕಿದರು. ಅಣೆಕಟ್ಟು ನಿರ್ಮಿಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>‘ಕಾವೇರಿ ನದಿ ಕೇವಲ ಕರ್ನಾಟಕಕ್ಕೆ ಸೇರಿದ್ದಲ್ಲ. ತಮಿಳುನಾಡು ಕೂಡಾ ಸಮಾನ ಹಕ್ಕು ಹೊಂದಿದೆ. ವಾಸ್ತವವಾಗಿ ಕಾವೇರಿ ನದಿಯು ತಮಿಳುನಾಡಿನಲ್ಲಿಯೇ ಹೆಚ್ಚು ದೂರ ಹರಿಯುತ್ತದೆ’ ಎಂದು ಸ್ಟಾಲಿನ್ ಹೇಳಿದರು.</p>.<p>ಸರ್ವಪಕ್ಷ ಸಭೆಯ ಮೂಲಕ ಕರ್ನಾಟಕ ಸರ್ಕಾರಕ್ಕೆ ಮಾತ್ರವಲ್ಲ, ಕೇಂದ್ರ ಸರ್ಕಾರಕ್ಕೂ ತಮಿಳುನಾಡಿನ ರಾಜಕೀಯ ಪಕ್ಷಗಳು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿವೆ ಎಂದು ಅವರು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ: </strong>‘ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡಬಾರದು’ ಎಂದು ತಮಿಳುನಾಡಿನ ಸರ್ವಪಕ್ಷಗಳ ಸಭೆ ಕೇಂದ್ರ ಸರ್ಕಾರವನ್ನು ಆಗ್ರಹಪಡಿಸಿದ್ದು, ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.</p>.<p class="title">ಯೋಜನೆ ಕುರಿತ ಚರ್ಚೆಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೋಮವಾರ ಕರೆದಿದ್ದ ಸಭೆಯಲ್ಲಿ 13 ಪಕ್ಷಗಳ ಮುಖಂಡರು ಒಮ್ಮತದ ನಿಲುವು ವ್ಯಕ್ತಪಡಿಸಿದ್ದು, ‘ಯೋಜನೆಯನ್ನು ತಡೆಯಲು ಸರ್ಕಾರಕ್ಕೆ ಸಹಕಾರ, ಬೆಂಬಲ ನೀಡಲಿದ್ದೇವೆ’ ಎಂದರು.</p>.<p>ಕರ್ನಾಟಕ ಸರ್ಕಾರ ಯೋಜನೆಯನ್ನು ಜಾರಿಗೊಳಿಸದಂತೆ ತಡೆಯಲು ಸುಪ್ರೀಂ ಕೋರ್ಟ್ನ ಮೆಟ್ಟಿಲೇರುವುದು ಒಳಗೊಂಡಂತೆ ಎಲ್ಲ ರೀತಿಯ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲೂ ಸಭೆಯು ತೀರ್ಮಾನಿಸಿತು.</p>.<p>ತಮಿಳುನಾಡು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲು ನವದೆಹಲಿಗೆ ಸರ್ವಪಕ್ಷಗಳ ನಿಯೋಗವು ತೆರಳಿ ನಿರ್ಣಯದ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ನೀಡಲು ನಿರ್ಧರಿಸಿತು.</p>.<p>ಸಭೆಯು ಸುಮಾರು ಎರಡು ಗಂಟೆ ನಡೆದಿದ್ದು, ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಟಾಲಿನ್ ಅವರು, ‘ಕರ್ನಾಟಕ ಸರ್ಕಾರ ಉದ್ದೇಶಿಸಿದಂತೆ ಅಣೆಕಟ್ಟು ನಿರ್ಮಾಣ ಮಾಡಿದರೆ ತಮಿಳುನಾಡು ಸಾಕಷ್ಟು ಕಳೆದುಕೊಳ್ಳಬೇಕಾದಿತು’ ಎಂದು ಹೇಳಿದರು.</p>.<p>‘ಕಾವೇರಿ ನದಿಪಾತ್ರದಲ್ಲಿ ನಿರ್ಮಾಣ ಚಟುವಟಿಕೆ ಕೈಗೊಳ್ಳಬಾರದು ಎಂಬುದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಸ್ಪಷ್ಟವಾಗಿದೆ. ಆದರೂ, ಅಣೆಕಟ್ಟು ನಿರ್ಮಿಸಲು ಕರ್ನಾಟಕ ಮುಂದಾಗಿದೆ. ಇದರಿಂದ ರಾಜ್ಯದ ರೈತರಿಗೆ ಧಕ್ಕೆಯಾಗಲಿದೆ’ ಎಂದರು.</p>.<p>‘ಕರ್ನಾಟಕದ ಈ ಕ್ರಮ ಸಾಂವಿಧಾನಿಕ ಕಾಯ್ದೆಗಳಿಗೆ ಸವಾಲು ಹಾಕುವಂತದ್ದಾಗಿದೆ. ಈ ಕಾರಣದಿಂದ ಕೇಂದ್ರದ ಸಂಬಂಧಿಸಿದ ಸಚಿವಾಲಯಗಳು ಯೋಜನೆಗೆ ಯಾವುದೇ ರೀತಿ ಅನುಮೋದನೆ ನೀಡಬಾರದು’ ಎಂಬ ನಿರ್ಣಯವನ್ನು ಓದಲಾಯಿತು.</p>.<p>ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಮೇಕೆದಾಟು ಯೋಜನೆ ನಿರ್ಮಾಣ ಜಾರಿಗೊಳಿಸಿಯೇ ಸಿದ್ಧ ಎಂದು ಕರ್ನಾಟಕ ಇತ್ತೀಚೆಗೆ ಪ್ರತಿಪಾದಿಸಿತ್ತು.</p>.<p>ಯೋಜನೆಯಿಂದ ತಮಿಳುನಾಡು ರೈತರ ಹಿತಾಸಕ್ತಿಗೆ ಧಕ್ಕೆಯಾಗದು ಎಂಬ ಕರ್ನಾಟಕದ ವಾದವನ್ನು ಸ್ಟಾಲಿನ್ ತಳ್ಳಿಹಾಕಿದರು. ಅಣೆಕಟ್ಟು ನಿರ್ಮಿಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>‘ಕಾವೇರಿ ನದಿ ಕೇವಲ ಕರ್ನಾಟಕಕ್ಕೆ ಸೇರಿದ್ದಲ್ಲ. ತಮಿಳುನಾಡು ಕೂಡಾ ಸಮಾನ ಹಕ್ಕು ಹೊಂದಿದೆ. ವಾಸ್ತವವಾಗಿ ಕಾವೇರಿ ನದಿಯು ತಮಿಳುನಾಡಿನಲ್ಲಿಯೇ ಹೆಚ್ಚು ದೂರ ಹರಿಯುತ್ತದೆ’ ಎಂದು ಸ್ಟಾಲಿನ್ ಹೇಳಿದರು.</p>.<p>ಸರ್ವಪಕ್ಷ ಸಭೆಯ ಮೂಲಕ ಕರ್ನಾಟಕ ಸರ್ಕಾರಕ್ಕೆ ಮಾತ್ರವಲ್ಲ, ಕೇಂದ್ರ ಸರ್ಕಾರಕ್ಕೂ ತಮಿಳುನಾಡಿನ ರಾಜಕೀಯ ಪಕ್ಷಗಳು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿವೆ ಎಂದು ಅವರು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>