ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ತಮಿಳುನಾಡಿನಲ್ಲಿ ಬಿಜೆಪಿ ಜೊತೆ ಸೀಟು ಹಂಚಿಕೆ ವಿಚಾರವನ್ನು ಚುನಾವಣೆ ಅಧಿಸೂಚನೆ ಪ್ರಕಟವಾದ ಬಳಿಕ ಅಂತಿಮಗೊಳಿಸಲಾಗುವುದು ಎಂದು ತಿಳಿಸಿರುವ ತಮಿಳುನಾಡಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ, ಎಐಎಡಿಎಂಕೆಗೆ ವಿ.ಕೆ.ಶಶಿಕಲಾ ಸೇರ್ಪಡೆ ವಿಚಾರವನ್ನು ತಿರಸ್ಕರಿಸಿದ್ದಾರೆ.