<p class="bodytext"><strong>ಚೆನ್ನೈ: </strong>‘ನೀಟ್’ ವಿರೋಧಿಸಲು ಮತ್ತು ಶಿಕ್ಷಣದಲ್ಲಿ ‘ರಾಜ್ಯಗಳ ಆದ್ಯತೆ’ ಪುನರ್ಸ್ಥಾಪನೆಗೆ ಬೆಂಬಲ ಕೋರಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಬಿಜೆಪಿಯೇತರ ಆಡಳಿತವಿರುವ 11 ರಾಜ್ಯಗಳು ಮತ್ತು ಗೋವಾದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.</p>.<p>ನೀಟ್ಗೆ ತಮ್ಮ ಸರ್ಕಾರ ವಿರೋಧವಾಗಿರುವುದನ್ನು ಪತ್ರದಲ್ಲಿ ಪುನರುಚ್ಚರಿಸಿರುವ ಸ್ಟಾಲಿನ್, ನೀಟ್ಗೆ ವಿರೋಧ ವ್ಯಕ್ತಪಡಿಸುವಂತೆ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಲು ತಮ್ಮ ಪಕ್ಷದ ಸಂಸದರನ್ನು ನಿಯೋಜಿಸಿದ್ದಾರೆ ಎಂದು ಸರ್ಕಾರ ಸೋಮವಾರ ಹೇಳಿದೆ.</p>.<p>‘ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆ ಪುನರ್ಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನ ಮಾಡಬೇಕಾಗಿದೆ. ಈ ನಿರ್ಣಾಯಕ ವಿಷಯದಲ್ಲಿ ನಿಮ್ಮ ಸಹಕಾರಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ’ ಎಂದು ಸ್ಟಾಲಿನ್, ಆಂಧ್ರಪ್ರದೇಶ, ಛತ್ತೀಸ್ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.</p>.<p>ಅ.1 ರಂದು ಬರೆದಿರುವ ಪತ್ರವನ್ನು ಸೋಮವಾರ ಮಾಧ್ಯಮಗಳಿಗೆ ನೀಡಿರುವ ಅವರು, ರಾಜ್ಯ ಸರ್ಕಾರಗಳು ತಮ್ಮ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ವಿಧಾನವನ್ನು ನಿರ್ಧರಿಸುವಲ್ಲಿ ತಮ್ಮ ಸಾಂವಿಧಾನಿಕ ಹಕ್ಕು ಮತ್ತು ಸ್ಥಾನವನ್ನು ಪ್ರತಿಪಾದಿಸಬೇಕಾಗಿದೆ ಎಂದು ಒತ್ತಾಯಿಸಿದರು.</p>.<p>ರಾಜ್ಯದಲ್ಲಿ ನೀಟ್ನ ಪರಿಣಾಮ ಕಂಡುಹಿಡಿಯಲು ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಎ.ಕೆ. ರಾಜನ್ ಸಮಿತಿಯು ಜುಲೈನಲ್ಲಿ ಸಲ್ಲಿಸಿರುವ 165 ಪುಟಗಳ ವರದಿಯನ್ನು ಮತ್ತು ಈ ವರದಿ ಆಧಾರದಲ್ಲಿ ಸೆ.13 ರಂದು ವಿಧಾಸಭೆಯಲ್ಲಿ ಅಂಗೀಕರಿಸಲಾದ ನೀಟ್ನಿಂದ ವಿನಾಯಿತಿ ನೀಡುವ ಮಸೂದೆಯ ಪ್ರತಿಯನ್ನು ಸ್ಟಾಲಿನ್ ಈ ಪತ್ರದ ಜತೆಗೆ ಲಗತ್ತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಚೆನ್ನೈ: </strong>‘ನೀಟ್’ ವಿರೋಧಿಸಲು ಮತ್ತು ಶಿಕ್ಷಣದಲ್ಲಿ ‘ರಾಜ್ಯಗಳ ಆದ್ಯತೆ’ ಪುನರ್ಸ್ಥಾಪನೆಗೆ ಬೆಂಬಲ ಕೋರಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಬಿಜೆಪಿಯೇತರ ಆಡಳಿತವಿರುವ 11 ರಾಜ್ಯಗಳು ಮತ್ತು ಗೋವಾದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.</p>.<p>ನೀಟ್ಗೆ ತಮ್ಮ ಸರ್ಕಾರ ವಿರೋಧವಾಗಿರುವುದನ್ನು ಪತ್ರದಲ್ಲಿ ಪುನರುಚ್ಚರಿಸಿರುವ ಸ್ಟಾಲಿನ್, ನೀಟ್ಗೆ ವಿರೋಧ ವ್ಯಕ್ತಪಡಿಸುವಂತೆ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಲು ತಮ್ಮ ಪಕ್ಷದ ಸಂಸದರನ್ನು ನಿಯೋಜಿಸಿದ್ದಾರೆ ಎಂದು ಸರ್ಕಾರ ಸೋಮವಾರ ಹೇಳಿದೆ.</p>.<p>‘ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆ ಪುನರ್ಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನ ಮಾಡಬೇಕಾಗಿದೆ. ಈ ನಿರ್ಣಾಯಕ ವಿಷಯದಲ್ಲಿ ನಿಮ್ಮ ಸಹಕಾರಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ’ ಎಂದು ಸ್ಟಾಲಿನ್, ಆಂಧ್ರಪ್ರದೇಶ, ಛತ್ತೀಸ್ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.</p>.<p>ಅ.1 ರಂದು ಬರೆದಿರುವ ಪತ್ರವನ್ನು ಸೋಮವಾರ ಮಾಧ್ಯಮಗಳಿಗೆ ನೀಡಿರುವ ಅವರು, ರಾಜ್ಯ ಸರ್ಕಾರಗಳು ತಮ್ಮ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ವಿಧಾನವನ್ನು ನಿರ್ಧರಿಸುವಲ್ಲಿ ತಮ್ಮ ಸಾಂವಿಧಾನಿಕ ಹಕ್ಕು ಮತ್ತು ಸ್ಥಾನವನ್ನು ಪ್ರತಿಪಾದಿಸಬೇಕಾಗಿದೆ ಎಂದು ಒತ್ತಾಯಿಸಿದರು.</p>.<p>ರಾಜ್ಯದಲ್ಲಿ ನೀಟ್ನ ಪರಿಣಾಮ ಕಂಡುಹಿಡಿಯಲು ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಎ.ಕೆ. ರಾಜನ್ ಸಮಿತಿಯು ಜುಲೈನಲ್ಲಿ ಸಲ್ಲಿಸಿರುವ 165 ಪುಟಗಳ ವರದಿಯನ್ನು ಮತ್ತು ಈ ವರದಿ ಆಧಾರದಲ್ಲಿ ಸೆ.13 ರಂದು ವಿಧಾಸಭೆಯಲ್ಲಿ ಅಂಗೀಕರಿಸಲಾದ ನೀಟ್ನಿಂದ ವಿನಾಯಿತಿ ನೀಡುವ ಮಸೂದೆಯ ಪ್ರತಿಯನ್ನು ಸ್ಟಾಲಿನ್ ಈ ಪತ್ರದ ಜತೆಗೆ ಲಗತ್ತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>