ಈ ಬಗ್ಗೆ ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, 'ಎನ್ಇಟಿ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ವಿನಾಯ್ತಿ ನೀಡುವ ಮಸೂದೆಯನ್ನು ರಾಜ್ಯಪಾಲರು ರಾಷ್ಟ್ರಪತಿಗಳಿಗೆ ರವಾನಿಸಿದ್ದಾರೆ. ಇದೊಂದು ಐತಿಹಾಸಿಕ ಬೆಳವಣಿಗೆ.ಈ ವಿಚಾರವನ್ನು ರಾಜ್ಯಪಾಲರ ಕಾರ್ಯದರ್ಶಿ ನನಗೆ ತಿಳಿಸಿದ್ದಾರೆ. ಈ ಸಂತೋಷದ ಸುದ್ದಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಹರ್ಷಿತನಾಗಿದ್ದೇನೆ' ಎಂದು ಹೇಳಿದ್ದಾರೆ.