ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ನೀಟ್ ಮಸೂದೆ ರಾಷ್ಟ್ರಪತಿ ಅಂಕಿತಕ್ಕಾಗಿ ಕೇಂದ್ರಕ್ಕೆ ರವಾನೆ

ಈ ಘಟನೆ ಐತಿಹಾಸಿಕ ಘಟನೆ ಎಂದು ಸಿಎಂ ಸ್ಟಾಲಿನ್ ಬಣ್ಣನೆ
Last Updated 4 ಮೇ 2022, 12:15 IST
ಅಕ್ಷರ ಗಾತ್ರ

ಚೆನ್ನೈ: ರಾಜ್ಯದ ವಿದ್ಯಾರ್ಥಿಗಳಿಗೆ ನೀಟ್‌ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ)ನಿಂದ ವಿನಾಯ್ತಿ ನೀಡುವ ಮಸೂದೆಗೆ ತಮಿಳುನಾಡು ವಿಧಾನಸಭೆ ಮತ್ತೆ ಅಂಗೀಕಾರ ನೀಡಿದ ಸುಮಾರು 3 ತಿಂಗಳ ಬಳಿಕ, ರಾಷ್ಟ್ರಪತಿಯವರ ಅಂಕಿತಕ್ಕಾಗಿ ಈ ಮಸೂದೆಯನ್ನು ರಾಜ್ಯಪಾಲ ಆರ್.ಎನ್. ರವಿ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ರವಾನಿಸಿದ್ದಾರೆ.

ಈ ಬಗ್ಗೆ ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, 'ಎನ್ಇಟಿ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ವಿನಾಯ್ತಿ ನೀಡುವ ಮಸೂದೆಯನ್ನು ರಾಜ್ಯಪಾಲರು ರಾಷ್ಟ್ರಪತಿಗಳಿಗೆ ರವಾನಿಸಿದ್ದಾರೆ. ಇದೊಂದು ಐತಿಹಾಸಿಕ ಬೆಳವಣಿಗೆ.ಈ ವಿಚಾರವನ್ನು ರಾಜ್ಯಪಾಲರ ಕಾರ್ಯದರ್ಶಿ ನನಗೆ ತಿಳಿಸಿದ್ದಾರೆ. ಈ ಸಂತೋಷದ ಸುದ್ದಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಹರ್ಷಿತನಾಗಿದ್ದೇನೆ' ಎಂದು ಹೇಳಿದ್ದಾರೆ.

ಆದರೆ, ನೀಟ್‌ನಿಂದ ರಾಜ್ಯಗಳಿಗೆ ವಿನಾಯ್ತಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಸೂದೆಗೆ ರಾಷ್ಟ್ರಪತಿಯವರ ಅಂಕಿತ ಬೀಳುವುದು ಅನುಮಾನವಾಗಿದೆ. ಈ ಮಸೂದೆಗೆ ರಾಷ್ಟ್ರಪತಿಯವರ ಅಂಕಿತ ಪಡೆಯಲು ಪ್ರತಿಪಕ್ಷಗಳು ಸಹ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT