‘ವಿದ್ಯಾರ್ಥಿಗಳು, ಶಿಕ್ಷಕರು ಈ ವರ್ಷ ವಿಭಿನ್ನ ಪರಿಸ್ಥಿತಿ ಎದುರಿಸಿದ್ದಾರೆ. ಈ ಬಗ್ಗೆ ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು 2020–21ನೇ ಶೈಕ್ಷಣಿಕ ವರ್ಷದಲ್ಲಿನ 9,10 ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯದೆಯೇ ಉತ್ತೀರ್ಣಗೊಳಿಸಲಾಗಿದೆ’ ಎಂದು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ವಿಧಾನಸಭೆಯಲ್ಲಿ ಗುರುವಾರ ಪ್ರಕಟಿಸಿದ್ದಾರೆ.