<p><strong>ಚೆನ್ನೈ:</strong> ಓಮೈಕ್ರಾನ್ ಒಳಗೊಂಡಂತೆ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಮತ್ತಷ್ಟು ಕಠಿಣ ನಿರ್ಬಂಧ ಹೇರಲಾಗಿದೆ.</p>.<p>ನಾಳೆಯಿಂದ (ಜ.6, ಗುರುವಾರ) ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ಕರ್ಫ್ಯೂ ಹಾಗೂ ಭಾನುವಾರ (ಜ.9) ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/omicron-alert-union-health-ministry-revises-home-isolation-rules-for-covid19-patients-899261.html" itemprop="url">ಓಮೈಕ್ರಾನ್ ಮುನ್ನೆಚ್ಚರಿಕೆ: ಹೋಂ ಐಸೊಲೇಷನ್ಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ </a></p>.<p>ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ಕುರಿತು ಘೋಷಣೆ ಮಾಡಿದ್ದಾರೆ.</p>.<p>ಬಸ್, ಉಪನಗರ ರೈಲು ಮತ್ತು ಮೆಟ್ರೊ ರೈಲುಗಳಲ್ಲಿ ಪ್ರಯಾಣಿಕರ ಸಂಚಾರವನ್ನು ಶೇ 50ಕ್ಕೆ ಮಿತಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>'ಪೊಂಗಲ್' ಹಬ್ಬದ ಪ್ರಯುಕ್ತ ನಡೆಯಬೇಕಿದ್ದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನುಮುಂದೂಡಲಾಗಿದೆ.</p>.<p>ಶುಕ್ರವಾರ, ಶನಿವಾರ ಮತ್ತು ಭಾನುವಾರದಂದುಪ್ರಾರ್ಥನಾ ಮಂದಿರಗಳಲ್ಲಿ ಸಾರ್ವಜನಿಕರಪ್ರವೇಶಕ್ಕೆ ಅವಕಾಶಇರುವುದಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಓಮೈಕ್ರಾನ್ ಒಳಗೊಂಡಂತೆ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಮತ್ತಷ್ಟು ಕಠಿಣ ನಿರ್ಬಂಧ ಹೇರಲಾಗಿದೆ.</p>.<p>ನಾಳೆಯಿಂದ (ಜ.6, ಗುರುವಾರ) ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ಕರ್ಫ್ಯೂ ಹಾಗೂ ಭಾನುವಾರ (ಜ.9) ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/omicron-alert-union-health-ministry-revises-home-isolation-rules-for-covid19-patients-899261.html" itemprop="url">ಓಮೈಕ್ರಾನ್ ಮುನ್ನೆಚ್ಚರಿಕೆ: ಹೋಂ ಐಸೊಲೇಷನ್ಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ </a></p>.<p>ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ಕುರಿತು ಘೋಷಣೆ ಮಾಡಿದ್ದಾರೆ.</p>.<p>ಬಸ್, ಉಪನಗರ ರೈಲು ಮತ್ತು ಮೆಟ್ರೊ ರೈಲುಗಳಲ್ಲಿ ಪ್ರಯಾಣಿಕರ ಸಂಚಾರವನ್ನು ಶೇ 50ಕ್ಕೆ ಮಿತಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>'ಪೊಂಗಲ್' ಹಬ್ಬದ ಪ್ರಯುಕ್ತ ನಡೆಯಬೇಕಿದ್ದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನುಮುಂದೂಡಲಾಗಿದೆ.</p>.<p>ಶುಕ್ರವಾರ, ಶನಿವಾರ ಮತ್ತು ಭಾನುವಾರದಂದುಪ್ರಾರ್ಥನಾ ಮಂದಿರಗಳಲ್ಲಿ ಸಾರ್ವಜನಿಕರಪ್ರವೇಶಕ್ಕೆ ಅವಕಾಶಇರುವುದಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>