ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಕಾವೇರಿ ಸೇರಿದಂತೆ ಇತರ ನದಿಗಳ ಮಾಲಿನ್ಯ ತಡೆಗಟ್ಟಲು ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈರೋಡ್, ಕುಮಾರಪಾಳ್ಯಂ, ಪಳ್ಳಿಪಾಳ್ಯಂ, ಕರೂರ್ ಮತ್ತು ತಿರುಪುರ್ನಲ್ಲಿನ ಡೈಯಿಂಗ್ ಘಟಕಗಳಿಂದ ಸಂಸ್ಕರಿಸದ ತ್ಯಾಜ್ಯಗಳನ್ನು ಕಾವೇರಿ ಮತ್ತು ಅದರ ಉಪನದಿಗಳಿಗೆ ಬಿಡಲಾಗಿದೆಯೇ ಎಂಬುದನ್ನು ಪರಿಶೀಲಿಸಲು ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ (ಟಿಎನ್ಪಿಸಿಬಿ) ಒಳಗೊಂಡ ಐದು ಸಮಿತಿಗಳನ್ನು ಅ.6 ರಂದು ರಚಿಸಲಾಗಿದೆ ಎಂದು ಸಚಿವರು ಹೇಳಿದರು.