<p><strong>ಪುದುಕೊಟ್ಟೈ, ತಮಿಳುನಾಡು: </strong>ಕಾವೇರಿ, ವೈಗೈ ಹಾಗೂ ಗುಂಡರ್ ನದಿಗಳನ್ನು ಜೋಡಿಸುವ ₹ 14,400 ಕೋಟಿ ವೆಚ್ಚದ ಮಹತ್ವಾಕಾಂಕ್ಷೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ತಮಿಳುನಾಡು ಸರ್ಕಾರ ಭಾನುವಾರ ಭೂಮಿಪೂಜೆ ನೆರವೇರಿಸಿತು.</p>.<p>ಒಣಭೂಮಿಯೇ ಹೆಚ್ಚಾಗಿರುವ ರಾಜ್ಯದ ದಕ್ಷಿಣ ಭಾಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು 6,000 ಘನ ಅಡಿಗಳಷ್ಟು ಹೆಚ್ಚುವರಿ ನೀರನ್ನು ಈ ಯೋಜನೆಯಡಿ ತಿರುಗಿಸಲಾಗುತ್ತದೆ.</p>.<p>ಜಿಲ್ಲೆಯ ಕುಣತ್ತೂರು ಎಂಬಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ, ಉಪಮುಖ್ಯಮಂತ್ರಿ ಒ.ಪನ್ನೀರ್ಸೆಲ್ವಂ ಭೂಮಿಪೂಜೆ ನೆರವೇರಿಸಿದರು.</p>.<p>ಮೊದಲ ಹಂತದಲ್ಲಿ ₹ 6,941 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈ ಯೋಜನೆಯಡಿ ಒಟ್ಟು 262 ಕಿ.ಮೀ. ಉದ್ದದ ಕಾಲುವೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.ಈ ಪೈಕಿ ಮೊದಲ ಹಂತದಲ್ಲಿ 118 ಕಿ.ಮೀ. ಉದ್ದದ ಕಾಲುವೆಯನ್ನು ನಿರ್ಮಿಸಲಾಗುತ್ತದೆ. ಕಾವೇರಿ ನದಿಯಲ್ಲಿನ ಹೆಚ್ಚುವರಿ ನೀರನ್ನು ಕಾಲುವೆ ಮೂಲಕ ಗುಂಡರ್ ನದಿಗೆ ಹರಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.</p>.<p>ಪ್ರವಾಹ ಕಂಡು ಬಂದ ದಿನಗಳಲ್ಲಿ ಕಾವೇರಿ, ವೈಗೈ, ದಕ್ಷಿಣ ವೆಲ್ಲಾರ್ ನದಿಗಳಲ್ಲಿನ ಹೆಚ್ಚುವರಿ ನೀರನ್ನು ಈ ಕಾಲುವೆಗಳ ಮೂಲಕ ಗುಂಡರ್ ನದಿಗೆ ಹರಿಸಲಾಗುವುದು. ಇದರಿಂದ ದಕ್ಷಿಣ ತಮಿಳುನಾಡಿನ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಸಾಧ್ಯವಾಗುವುದು.</p>.<p>ತಿರುಚಿರಾಪಳ್ಳಿ, ಪುದುಕೊಟ್ಟೈ, ಶಿವಗಂಗಾ, ವಿರುಧುನಗರ, ರಾಮನಾಥಪುರಂ ಹಾಗೂ ಕರೂರು ಜಿಲ್ಲೆಗಳಿಗೆ ಈ ಯೋಜನೆಯಿಂದ ಅನುಕೂಲವಾಗುವುದು. ಈ ಜಿಲ್ಲೆಗಳಲ್ಲಿರುವ ಸಾವಿರಕ್ಕೂ ಅಧಿಕ ಕೆರೆಗಳ ಪುನಶ್ಚೇತನ ಸಾಧ್ಯವಾಗಲಿದೆ ಎಂದು ಇವೇ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುದುಕೊಟ್ಟೈ, ತಮಿಳುನಾಡು: </strong>ಕಾವೇರಿ, ವೈಗೈ ಹಾಗೂ ಗುಂಡರ್ ನದಿಗಳನ್ನು ಜೋಡಿಸುವ ₹ 14,400 ಕೋಟಿ ವೆಚ್ಚದ ಮಹತ್ವಾಕಾಂಕ್ಷೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ತಮಿಳುನಾಡು ಸರ್ಕಾರ ಭಾನುವಾರ ಭೂಮಿಪೂಜೆ ನೆರವೇರಿಸಿತು.</p>.<p>ಒಣಭೂಮಿಯೇ ಹೆಚ್ಚಾಗಿರುವ ರಾಜ್ಯದ ದಕ್ಷಿಣ ಭಾಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು 6,000 ಘನ ಅಡಿಗಳಷ್ಟು ಹೆಚ್ಚುವರಿ ನೀರನ್ನು ಈ ಯೋಜನೆಯಡಿ ತಿರುಗಿಸಲಾಗುತ್ತದೆ.</p>.<p>ಜಿಲ್ಲೆಯ ಕುಣತ್ತೂರು ಎಂಬಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ, ಉಪಮುಖ್ಯಮಂತ್ರಿ ಒ.ಪನ್ನೀರ್ಸೆಲ್ವಂ ಭೂಮಿಪೂಜೆ ನೆರವೇರಿಸಿದರು.</p>.<p>ಮೊದಲ ಹಂತದಲ್ಲಿ ₹ 6,941 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈ ಯೋಜನೆಯಡಿ ಒಟ್ಟು 262 ಕಿ.ಮೀ. ಉದ್ದದ ಕಾಲುವೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.ಈ ಪೈಕಿ ಮೊದಲ ಹಂತದಲ್ಲಿ 118 ಕಿ.ಮೀ. ಉದ್ದದ ಕಾಲುವೆಯನ್ನು ನಿರ್ಮಿಸಲಾಗುತ್ತದೆ. ಕಾವೇರಿ ನದಿಯಲ್ಲಿನ ಹೆಚ್ಚುವರಿ ನೀರನ್ನು ಕಾಲುವೆ ಮೂಲಕ ಗುಂಡರ್ ನದಿಗೆ ಹರಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.</p>.<p>ಪ್ರವಾಹ ಕಂಡು ಬಂದ ದಿನಗಳಲ್ಲಿ ಕಾವೇರಿ, ವೈಗೈ, ದಕ್ಷಿಣ ವೆಲ್ಲಾರ್ ನದಿಗಳಲ್ಲಿನ ಹೆಚ್ಚುವರಿ ನೀರನ್ನು ಈ ಕಾಲುವೆಗಳ ಮೂಲಕ ಗುಂಡರ್ ನದಿಗೆ ಹರಿಸಲಾಗುವುದು. ಇದರಿಂದ ದಕ್ಷಿಣ ತಮಿಳುನಾಡಿನ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಸಾಧ್ಯವಾಗುವುದು.</p>.<p>ತಿರುಚಿರಾಪಳ್ಳಿ, ಪುದುಕೊಟ್ಟೈ, ಶಿವಗಂಗಾ, ವಿರುಧುನಗರ, ರಾಮನಾಥಪುರಂ ಹಾಗೂ ಕರೂರು ಜಿಲ್ಲೆಗಳಿಗೆ ಈ ಯೋಜನೆಯಿಂದ ಅನುಕೂಲವಾಗುವುದು. ಈ ಜಿಲ್ಲೆಗಳಲ್ಲಿರುವ ಸಾವಿರಕ್ಕೂ ಅಧಿಕ ಕೆರೆಗಳ ಪುನಶ್ಚೇತನ ಸಾಧ್ಯವಾಗಲಿದೆ ಎಂದು ಇವೇ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>