ಚೆನ್ನೈ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿಮೇಕೆದಾಟು ಅಣೆಕಟ್ಟು ಸಮಸ್ಯೆ ಚರ್ಚಿಸುವ ನಿರ್ಧಾರ ‘ಆಘಾತಕಾರಿ ಮತ್ತು ಕಾನೂನುಬಾಹಿರ‘ ಎಂದು ಹೇಳಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಬಿಡುವುದಿಲ್ಲ. ಯೋಜನೆ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಹೋರಾಟ ನಡೆಸಲಾಗುವುದು ಎಂದು ಪ್ರತಿಪಾದಿಸಿದರು.