ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚಾಟ್‌ಜಿಪಿಟಿ’ ನೆರವು ಪಡೆದ ನ್ಯಾಯಮೂರ್ತಿ

Last Updated 28 ಮಾರ್ಚ್ 2023, 17:02 IST
ಅಕ್ಷರ ಗಾತ್ರ

ಚಂಡೀಗಢ (ಪಿಟಿಐ): ಕ್ರೌರ್ಯದಿಂದ ಕೂಡಿದ ದಾಳಿ ಪ್ರಕರಣದ ಆರೋಪಿಗೆ ಜಾಮೀನು ನೀಡುವ ವಿಚಾರದಲ್ಲಿ ಜಗತ್ತಿನಾದ್ಯಂತ ಅನುಸರಿಸಲಾಗುತ್ತಿರುವ ಕ್ರಮದ ಕುರಿತ ಮಾಹಿತಿಗಾಗಿ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ‘ಚಾಟ್‌ಜಿಪಿಟಿ’ಯ (ಕೃತಕ ಬುದ್ದಿಮತ್ತೆ) ನೆರವು ಪಡೆದಿದೆ. ಭಾರತದ ನ್ಯಾಯಾಂಗ ವ್ಯವಸ್ಥೆಯ ಮಟ್ಟಿಗೆ ಇದು ಹೊಸ ಪ್ರಯತ್ನವಾಗಿದೆ.

ಕೊಲೆ ಪ್ರಕರಣದ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಅನೂಪ್‌ ಚಿತ್ಕಾರ್‌, ‘ಇಂತಹ ಪ್ರಕರಣದಲ್ಲಿ ವಿಶ್ವದ ಇತರೆ ದೇಶಗಳಲ್ಲಿ ಅನುಸರಿಸುವ ಕ್ರಮದ ಕುರಿತ ವಿವರವಾದ ಮಾಹಿತಿ ಪಡೆಯುವುದಕ್ಕಾಗಿ ‘ಚಾಟ್‌ಜಿಪಿಟಿ’ಯ ಮೊರೆ ಹೋಗಲಾಯಿತು’ ಎಂದಿದ್ದಾರೆ.

ಆರೋಪಿಯ ಜಾಮೀನು ಅರ್ಜಿಯನ್ನೂ ಅವರು ವಜಾಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT