ತಮ್ಮ ವರ್ಗಾವಣೆ ಸುದ್ದಿ ತಿಳಿದ ಶಿಕ್ಷಕಿಯರಾದ ಮನೋರಮಾ ಮಿಶ್ರಾ ಮತ್ತು ಗೋಲ್ಡಿ ಕಟಿಯಾರ್ ತೀವ್ರ ಅಸಮಾಧಾನಗೊಂಡಿದ್ದರು. ‘ಈ ವಿಚಾರವಾಗಿ ಶಿಕ್ಷಕರು ಮೊದಲಿಗೆ ವಿದ್ಯಾರ್ಥಿಗಳನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ. ನಂತರ, ವರ್ಗಾವಣೆಯನ್ನು ವಿರೋಧಿಸಲು ಅವರನ್ನು ಒತ್ತಾಯಿಸಿದ್ದಾರೆ. ಹೀಗೆ ಮಾಡಿದರೆ ಅಧಿಕಾರಿಗಳು ಆದೇಶಗಳನ್ನು ರದ್ದುಗೊಳಿಸುತ್ತಾರೆ ಎಂದು ವಿದ್ಯಾರ್ಥಿಗಳಿಗೆ ಹೇಳಿದ್ದರು‘ ಎಂದು ಲಖಿಂಪುರ ಖೇರಿ ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.