ನವದೆಹಲಿ: ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪದಕ ಗಳಿಸಿರುವ ಭಾರತದ ಕ್ರೀಡಾಪಟುಗಳನ್ನು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿನಂದಿಸಿದ್ದಾರೆ.
ಕಂಚಿನ ಪದಕ ಪಡೆದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ರಜತ ಪದಕ ಪಡೆದ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರ ಸಾಧನೆ ಎಲ್ಲ ಗ್ರಾಮೀಣ ಹೆಣ್ಣು ಮಕ್ಕಳಿಗೆ ಮಾದರಿ ಎಂದು ಅವರು ಹೇಳಿದ್ದಾರೆ.
ಒಲಿಂಪಿಕ್ನಲ್ಲಿ ಸತತ ಎರಡನೇ ಬಾರಿ ಪದಕ ಗಳಿಸಿರುವ ಸಿಂಧು ಅವರ ಸಾಧನೆ ಅನುಕರಣೀಯ ಎಂದು ಅವರು ತಿಳಿಸಿದ್ದಾರೆ.