ಆದಾಗ್ಯೂ, ತನಿಖೆಯ ಮೇಲೆ ಪರಿಣಾಮ ಬೀರಬಹುದಾದ ಸುದ್ದಿ ಪ್ರಸಾರವಾಗದಂತೆ ನೋಡಿಕೊಳ್ಳಲು ನ್ಯಾಯಾಲಯ ಮಾಧ್ಯಮ ಸಂಸ್ಥೆಗಳಿಗೆ ಸೂಚಿಸಿತು. ಅಲ್ಲದೆ, ‘ತನಿಖೆ ವಿವರಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿಲ್ಲ ಮತ್ತು ಮಾಡಲು ಉದ್ದೇಶಿಸಿಲ್ಲ’ ಎಂಬ ಹೇಳಿಕೆಗೆ ಬದ್ಧರಾಗಿ ಪ್ರಮಾಣ ಪತ್ರ ಸಲ್ಲಿಸುವಂತೆ ದೆಹಲಿ ಪೊಲೀಸರಿಗೂ ಹೈಕೋರ್ಟ್ ನಿರ್ದೇಶನ ನೀಡಿತು.