ದೆಹಲಿ ಮತ್ತು ಗುರುಗ್ರಾಮದಲ್ಲಿನ ಟ್ವಿಟರ್ ಕಚೇರಿಗೆ ಪೊಲೀಸರ ಎರಡು ತಂಡಗಳು ಭೇಟಿ ನೀಡಿದ ವಿಚಾರವಾಗಿ ಸೋಮವಾರ ಕಾಂಗ್ರೆಸ್, ಇದೊಂದು ಹೇಡಿತನದ ದಾಳಿಯಾಗಿದ್ದು, 'ಬಿಜೆಪಿ ನಾಯಕರ ಮೋಸದ ಟೂಲ್ಕಿಟ್ ಅನ್ನು ಮರೆಮಾಚಲು ದೆಹಲಿ ಪೊಲೀಸರು ಟ್ವಿಟರ್ ಕಚೇರಿ ಮೇಲೆ ಹೇಡಿತನದ ದಾಳಿ ನಡೆಸುವ ಮೂಲಕ ಬಿಜೆಪಿಯ ವ್ಯರ್ಥ ಪ್ರಯತ್ನಗಳನ್ನು ಬಹಿರಂಗಪಡಿಸಿದೆ' ಎಂದು ಹೇಳಿತ್ತು.