ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಭದ್ರತೆಯ ಸವಾಲು: ಸೇನಾ ಕಮಾಂಡರ್‌ಗಳ ಚರ್ಚೆ

Last Updated 24 ಅಕ್ಟೋಬರ್ 2021, 15:46 IST
ಅಕ್ಷರ ಗಾತ್ರ

ನವದೆಹಲಿ: ಸೋಮವಾರದಿಂದ ಇಲ್ಲಿ ಆರಂಭವಾಗಲಿರುವ ನಾಲ್ಕು ದಿನಗಳ ಸಮಾವೇಶದಲ್ಲಿ ಸೇನೆಯ ಉನ್ನತ ಕಮಾಂಡರ್‌ಗಳು ದೇಶದ ಭದ್ರತೆಯ ಸವಾಲುಗಳು ಹಾಗೂ ಪೂರ್ವ ಲಡಾಖ್‌ ಸೇರಿದಂತೆ ಭಾರತ–ಚೀನಾ ನಡುವಿನ ವಾಸ್ತವ ನಿಯಂತ್ರಣ ರೇಖೆಯ(ಎಲ್‌ಎಸಿ) ಸೂಕ್ಷ ಪ್ರದೇಶಗಳ ಸ್ಥಿತಿಗತಿಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ನಾಗರಿಕರ ಹತ್ಯೆ ಹಾಗೂ ಅಲ್ಲಿನ ಭದ್ರತಾ ಸನ್ನಿವೇಶಗಳ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದೂ ತಿಳಿಸಿವೆ.

ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಮತ್ತು ಕಮಾಂಡರ್‌ಗಳು ಪೂರ್ವ ಲಡಾಖ್‌ನ ಉದ್ವಿಗ್ನ ಸ್ಥಿತಿಯ ಕುರಿತು ಹಾಗೂ ಅಫ್ಗಾನಿಸ್ತಾನದ ತಾಲಿಬಾನ್‌ ಆಡಳಿತವು ದೇಶದ ಭದ್ರತೆ ಮೇಲೆ ಬೀರಬಹುದಾದ ಸಂಭವನೀಯ ಪರಿಣಾಮಗಳ ಕುರಿತೂ ಮಾತುಕತೆ ನಡೆಸುವರು ಎಂದೂ ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT