ಎರಡು ದಿನಗಳ ಭೇಟಿಗೆ ಇಲ್ಲಿಗೆ ಬಂದಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಸರ್ಕಾರದ 10ಕ್ಕೂ ಹೆಚ್ಚು ಸಚಿವರು, ಪಕ್ಷದ ಹಿರಿಯ ಮುಖಂಡರ ಜತೆ ಸಭೆ ನಡೆಸಿದರು. ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ದಿನೇಶ್ ಶರ್ಮಾ ಜೊತೆಗೂ ಚರ್ಚೆ ನಡೆಸಿದರು. ಕೋವಿಡ್ ನಿರ್ವಹಣೆ ವಿಚಾರದಲ್ಲಿ ಪಕ್ಷಕ್ಕೆ ಆಗಬಹುದಾದ ಸಂಭವನೀಯ ಹಾನಿ ಕುರಿತು ಸಚಿವರು, ಮುಖಂಡರಿಂದ ಸಂತೋಷ್ ಅವರು ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.