ಉಗ್ರರ ಅಟ್ಟಹಾಸವನ್ನು ನಿರಂತರವಾಗಿ ದಮನಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ. ಕಾರ್ಯಾಚರಣೆಯ ವಿವರಣೆ ನೀಡಿರುವ ಕಾಶ್ಮೀರದ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್, ಉಗ್ರ ವಿಲಾಯತ್ ಲೋನ್ ಅಲಿಯಾಸ್ ಸಜಾದ್ ಅಫ್ಘಾನಿಯ ಹತ್ಯೆಯನ್ನು ಖಚಿತಪಡಿಸಿದ್ದು, ಭದ್ರತಾ ಪಡೆ ಹಾಗೂ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.