<p><strong>ಶಿಲ್ಲಾಂಗ್: </strong>ಮೇಘಾಲಯದ ಪೂರ್ವ ಖಾಸಿಹಿಲ್ಸ್ ಜಿಲ್ಲೆಯಲ್ಲಿ ಶುಕ್ರವಾರ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಸರ್ಕಾರದ ಎದುರು ಶರಣಾಗಿದ್ದ ನಿಷೇಧಿತ ಬಂಡುಕೋರ ಸಂಘಟನೆಯೊಂದರ ಮಾಜಿ ಪ್ರಧಾನ ಕಾರ್ಯದರ್ಶಿ ಹತನಾಗಿದ್ದಾನೆ.</p>.<p>ಹತ್ಯೆಯಾದ ಉಗ್ರನನ್ನು ಚೆಸ್ಟೆರ್ಫೀಲ್ಡ್ ತಂಗ್ಖಿವ್(54) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಹೈನ್ನಿವ್ಟ್ರೆಪ್ ನ್ಯಾಷನಲ್ ಲಿಬರೇಷನ್ ಕೌನ್ಸಿಲ್(ಎನ್ಎನ್ಎಲ್ಸಿ) ಬಂಡುಕೋರ ಸಂಘಟನೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ. 2018ರಲ್ಲಿ ಮೇಘಾಲಯದ ಉಪ ಮುಖ್ಯಮಂತ್ರಿ ಪ್ರೆಸ್ಟೋನ್ ಟೈನ್ಸಾಂಗ್ ಎದುರು ಶರಣಾಗತನಾಗಿದ್ದ.</p>.<p>ರಾಜ್ಯದಲ್ಲಿ ಇತ್ತೀಚೆಗೆ ನಡೆದ ಐಇಡಿ ಸ್ಪೋಟಗಳಿಗೆ ಸಂಬಂಧಿಸಿದಂತೆ ಪೊಲೀಸರ ತಂಡ ಮಾವ್ಲೈನಲ್ಲಿರುವ ತಂಗ್ಖಿವ್ನ ಮಸಾರ್ ನಿವಾಸದ ಮೇಲೆ ದಾಳಿ ನಡೆಸಿತು‘ ಎಂದು ಪೊಲೀಸ್ ಮಹಾ ನಿರ್ದೇಶಕ ಆರ್. ಚಂದ್ರನಾಥನ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p>‘ಖ್ಲಿಯೆರಿಯಾತ್ನಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ತಂಗ್ಖಿವ್ನ ಕೈವಾಡವಿದೆ. ಈ ಕುರಿತು ನಮ್ಮಲ್ಲಿ ಸಾಕ್ಷ್ಯಗಳಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ತಂಡ ಶುಕ್ರವಾರ ಮುಂಜಾನೆ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ದಾಳಿಯ ವೇಳೆ, ಆತ ಚಾಕು ಹಿಡಿದು ನಮ್ಮ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ದಾಳಿ ಮಾಡಿದಾಗ, ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ‘ ಎಂದು ಚಂದ್ರನಾಥ್ ತಿಳಿಸಿದರು.</p>.<p>ಎನ್ಕೌಂಟರ್ನಲ್ಲಿ ತೀವ್ರವಾಗಿ ಗಾಯಗೊಂಡ ತಂಗ್ಖಿವ್ನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು.</p>.<p>ಪೊಲೀಸರು ತಂಗ್ಖಿವ್ನ ಮನೆಯಿಂದ ಲ್ಯಾಪ್ಟಾಪ್, ಮೊಬೈಲ್ಫೋನ್, ಬಂದೂಕು, ಡಿಜಿಟಲ್ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ‘ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಆತನ ಇಬ್ಬರು ಸಹಚರರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ‘ ಎಂದು ಚಂದ್ರನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಲ್ಲಾಂಗ್: </strong>ಮೇಘಾಲಯದ ಪೂರ್ವ ಖಾಸಿಹಿಲ್ಸ್ ಜಿಲ್ಲೆಯಲ್ಲಿ ಶುಕ್ರವಾರ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಸರ್ಕಾರದ ಎದುರು ಶರಣಾಗಿದ್ದ ನಿಷೇಧಿತ ಬಂಡುಕೋರ ಸಂಘಟನೆಯೊಂದರ ಮಾಜಿ ಪ್ರಧಾನ ಕಾರ್ಯದರ್ಶಿ ಹತನಾಗಿದ್ದಾನೆ.</p>.<p>ಹತ್ಯೆಯಾದ ಉಗ್ರನನ್ನು ಚೆಸ್ಟೆರ್ಫೀಲ್ಡ್ ತಂಗ್ಖಿವ್(54) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಹೈನ್ನಿವ್ಟ್ರೆಪ್ ನ್ಯಾಷನಲ್ ಲಿಬರೇಷನ್ ಕೌನ್ಸಿಲ್(ಎನ್ಎನ್ಎಲ್ಸಿ) ಬಂಡುಕೋರ ಸಂಘಟನೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ. 2018ರಲ್ಲಿ ಮೇಘಾಲಯದ ಉಪ ಮುಖ್ಯಮಂತ್ರಿ ಪ್ರೆಸ್ಟೋನ್ ಟೈನ್ಸಾಂಗ್ ಎದುರು ಶರಣಾಗತನಾಗಿದ್ದ.</p>.<p>ರಾಜ್ಯದಲ್ಲಿ ಇತ್ತೀಚೆಗೆ ನಡೆದ ಐಇಡಿ ಸ್ಪೋಟಗಳಿಗೆ ಸಂಬಂಧಿಸಿದಂತೆ ಪೊಲೀಸರ ತಂಡ ಮಾವ್ಲೈನಲ್ಲಿರುವ ತಂಗ್ಖಿವ್ನ ಮಸಾರ್ ನಿವಾಸದ ಮೇಲೆ ದಾಳಿ ನಡೆಸಿತು‘ ಎಂದು ಪೊಲೀಸ್ ಮಹಾ ನಿರ್ದೇಶಕ ಆರ್. ಚಂದ್ರನಾಥನ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p>‘ಖ್ಲಿಯೆರಿಯಾತ್ನಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ತಂಗ್ಖಿವ್ನ ಕೈವಾಡವಿದೆ. ಈ ಕುರಿತು ನಮ್ಮಲ್ಲಿ ಸಾಕ್ಷ್ಯಗಳಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ತಂಡ ಶುಕ್ರವಾರ ಮುಂಜಾನೆ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ದಾಳಿಯ ವೇಳೆ, ಆತ ಚಾಕು ಹಿಡಿದು ನಮ್ಮ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ದಾಳಿ ಮಾಡಿದಾಗ, ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ‘ ಎಂದು ಚಂದ್ರನಾಥ್ ತಿಳಿಸಿದರು.</p>.<p>ಎನ್ಕೌಂಟರ್ನಲ್ಲಿ ತೀವ್ರವಾಗಿ ಗಾಯಗೊಂಡ ತಂಗ್ಖಿವ್ನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು.</p>.<p>ಪೊಲೀಸರು ತಂಗ್ಖಿವ್ನ ಮನೆಯಿಂದ ಲ್ಯಾಪ್ಟಾಪ್, ಮೊಬೈಲ್ಫೋನ್, ಬಂದೂಕು, ಡಿಜಿಟಲ್ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ‘ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಆತನ ಇಬ್ಬರು ಸಹಚರರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ‘ ಎಂದು ಚಂದ್ರನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>