<p><strong>ಬೋಧಗಯಾ (ಬಿಹಾರ):</strong> ಪ್ರಮುಖ ಬೌದ್ಧ ಯಾತ್ರಾ ಸ್ಥಳ ಬೋಧಗಯಾವನ್ನು ವರ್ಷಪೂರ್ತಿ ಪ್ರವಾಸಿಗರ ಆಕರ್ಷಕ ತಾಣವನ್ನಾಗಿ ರೂಪಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಯೋಜನೆ ಸಿದ್ಧಪಡಿಸುತ್ತಿದೆ ಎಂದು ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p>ಇಲ್ಲಿ ಇತ್ತೀಚೆಗೆ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ವಿಚಾರ ಸಂಕಿರಣದಲ್ಲಿ ಕೇಂದ್ರ ಮತ್ತು ರಾಜ್ಯದ ಹಿರಿಯ ಅಧಿಕಾರಿಗಳೊಂದಿಗೆ ಪಾಲ್ಗೊಂಡಿದ್ದ ಪ್ರವಾಸೋದ್ಯಮ ಸಚಿವಾಲಯದ ಪ್ರಧಾನ ನಿರ್ದೇಶಕಿ ಜಿ. ಕಮಲ ವರ್ಧನ ರಾವ್ ಅವರು ಬೋಧಗಯಾ ಅಭಿವೃದ್ಧಿಪಡಿಸುವ ಕುರಿತು ಮಾತನಾಡಿದರು.</p>.<p>ಪ್ರವಾಸೋದ್ಯಮ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಮಾನ, ರೈಲು ಮತ್ತು ರಸ್ತೆ ಸಂಪರ್ಕವನ್ನು ಹೆಚ್ಚಿಸುವ ಕುರಿತ ಚರ್ಚೆಯೇ ವಿಚಾರ ಸಂಕಿರಣದ ಪ್ರಮುಖ ವಿಷಯವಾಗಿತ್ತು.</p>.<p>‘ಬಿಹಾರದ ಗಯಾ ಜಿಲ್ಲೆಯು ಧಾರ್ಮಿಕ ಮತ್ತು ಆಧ್ಯಾತ್ಮಕ ಪ್ರವಾಸೋದ್ಯಮಕ್ಕೆ ಪ್ರಸಿದ್ಧವಾಗಿದ್ದು, ಹೆಚ್ಚಾಗಿ ಹಿರಿಯ ನಾಗರಿಕರನ್ನು ಆಕರ್ಷಿಸುತ್ತಿದೆ. ಆದರೆ, ಯುವ ಸಮೂಹದ ಗಮನವನ್ನು ಸೆಳೆಯುವಂತೆ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದು ಪ್ರವಾಸೋದ್ಯಮ ಸಚಿವಾಲಯದ ಉದ್ದೇಶವಾಗಿದೆ’ ಎಂದು ಅವರು ತಿಳಿಸಿದರು. ಇದೇ ವೇಳೆ ಬೌದ್ಧ ಧರ್ಮದ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದರು.</p>.<p>ಸಾಹಸ ಪ್ರವಾಸೋದ್ಯಮ ಸೇರಿದಂತೆ ಹೊಸ ಪರಿಕಲ್ಪನೆಗಳನ್ನು ಅಳವಡಿಸುವ ಮೂಲಕ ಯುವ ಪ್ರವಾಸಿಗರನ್ನು ಸೆಳೆಯುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>‘ವಿಶ್ವದಾದ್ಯಂತ ಪ್ರವಾಸಿಗರನ್ನು ಆಕರ್ಷಿಸಲು, ಇಲ್ಲಿ ಸಂಪರ್ಕ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಅವಶ್ಯಕತೆಯಿದೆ. ಈ ವಿಷಯದ ಮೇಲೆ ಸರ್ಕಾರ ಕೆಲಸ ಮಾಡುತ್ತಿದೆ‘ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೋಧಗಯಾ (ಬಿಹಾರ):</strong> ಪ್ರಮುಖ ಬೌದ್ಧ ಯಾತ್ರಾ ಸ್ಥಳ ಬೋಧಗಯಾವನ್ನು ವರ್ಷಪೂರ್ತಿ ಪ್ರವಾಸಿಗರ ಆಕರ್ಷಕ ತಾಣವನ್ನಾಗಿ ರೂಪಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಯೋಜನೆ ಸಿದ್ಧಪಡಿಸುತ್ತಿದೆ ಎಂದು ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p>ಇಲ್ಲಿ ಇತ್ತೀಚೆಗೆ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ವಿಚಾರ ಸಂಕಿರಣದಲ್ಲಿ ಕೇಂದ್ರ ಮತ್ತು ರಾಜ್ಯದ ಹಿರಿಯ ಅಧಿಕಾರಿಗಳೊಂದಿಗೆ ಪಾಲ್ಗೊಂಡಿದ್ದ ಪ್ರವಾಸೋದ್ಯಮ ಸಚಿವಾಲಯದ ಪ್ರಧಾನ ನಿರ್ದೇಶಕಿ ಜಿ. ಕಮಲ ವರ್ಧನ ರಾವ್ ಅವರು ಬೋಧಗಯಾ ಅಭಿವೃದ್ಧಿಪಡಿಸುವ ಕುರಿತು ಮಾತನಾಡಿದರು.</p>.<p>ಪ್ರವಾಸೋದ್ಯಮ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಮಾನ, ರೈಲು ಮತ್ತು ರಸ್ತೆ ಸಂಪರ್ಕವನ್ನು ಹೆಚ್ಚಿಸುವ ಕುರಿತ ಚರ್ಚೆಯೇ ವಿಚಾರ ಸಂಕಿರಣದ ಪ್ರಮುಖ ವಿಷಯವಾಗಿತ್ತು.</p>.<p>‘ಬಿಹಾರದ ಗಯಾ ಜಿಲ್ಲೆಯು ಧಾರ್ಮಿಕ ಮತ್ತು ಆಧ್ಯಾತ್ಮಕ ಪ್ರವಾಸೋದ್ಯಮಕ್ಕೆ ಪ್ರಸಿದ್ಧವಾಗಿದ್ದು, ಹೆಚ್ಚಾಗಿ ಹಿರಿಯ ನಾಗರಿಕರನ್ನು ಆಕರ್ಷಿಸುತ್ತಿದೆ. ಆದರೆ, ಯುವ ಸಮೂಹದ ಗಮನವನ್ನು ಸೆಳೆಯುವಂತೆ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದು ಪ್ರವಾಸೋದ್ಯಮ ಸಚಿವಾಲಯದ ಉದ್ದೇಶವಾಗಿದೆ’ ಎಂದು ಅವರು ತಿಳಿಸಿದರು. ಇದೇ ವೇಳೆ ಬೌದ್ಧ ಧರ್ಮದ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದರು.</p>.<p>ಸಾಹಸ ಪ್ರವಾಸೋದ್ಯಮ ಸೇರಿದಂತೆ ಹೊಸ ಪರಿಕಲ್ಪನೆಗಳನ್ನು ಅಳವಡಿಸುವ ಮೂಲಕ ಯುವ ಪ್ರವಾಸಿಗರನ್ನು ಸೆಳೆಯುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>‘ವಿಶ್ವದಾದ್ಯಂತ ಪ್ರವಾಸಿಗರನ್ನು ಆಕರ್ಷಿಸಲು, ಇಲ್ಲಿ ಸಂಪರ್ಕ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಅವಶ್ಯಕತೆಯಿದೆ. ಈ ವಿಷಯದ ಮೇಲೆ ಸರ್ಕಾರ ಕೆಲಸ ಮಾಡುತ್ತಿದೆ‘ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>