<p class="title"><strong>ಶಿಮ್ಲಾ: </strong>ಹಲವು ರಾಜ್ಯಗಳಲ್ಲಿ ಬಿಸಿಗಾಳಿ ಅಪ್ಪಳಿಸುತ್ತಿದ್ದು, ದೇಶದಲ್ಲಿ ಕೋವಿಡ್ ಎರಡನೇ ಅಲೆಯ ತೀವ್ರತೆಯು ಕಡಿಮೆಯಾಗುತ್ತಿರುವುದರಿಂದ ಹಿಮಾಚಲ ಪ್ರದೇಶದತ್ತ ಪ್ರವಾಸಿಗರ ಚಿತ್ತ ಹರಿದಿದೆ.</p>.<p class="title">ಬಿಸಿಗಾಳಿ ಹೆಚ್ಚಾಗಿರುವ ರಾಜ್ಯಗಳಿಂದ ಜನರು ಪ್ರವಾಸಿಗರ ನೆಚ್ಚಿನ ತಾಣಗಳಾದ ಶಿಮ್ಲಾ, ಕುಫ್ರಿ, ನರ್ಕಂದ, ಡಾಲ್ ಹೌಸಿ, ಮನಾಲಿ, ಲಾಹೌಲ್ ಸೇರಿದಂತೆ ಇತರ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.</p>.<p class="title">ಕೋವಿಡ್ 2ನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದನ್ನು ಮನಗಂಡು ಪ್ರವಾಸೋದ್ಯಮದ ಚೇತರಿಕೆಗಾಗಿ ಅಲ್ಲಿನ ಸರ್ಕಾರ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಿದೆ. ಹಾಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ವಾರಾಂತ್ಯದ ದಿನಗಳಲ್ಲಿ ಇಲ್ಲಿನ ಹೋಟೆಲ್ಗಳಲ್ಲಿ ಉಳಿಯುತ್ತಿದ್ದಾರೆ.</p>.<p class="title">‘ಕಳೆದ ಕೆಲವು ದಿನಗಳಿಂದ ಹೋಟೆಲ್ಗಳಲ್ಲಿ ಉಳಿಯುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಪೂರ್ಣಪ್ರಮಾಣದಲ್ಲಿ ಇನ್ನೂ ಹೋಟೆಲ್ಗಳು ಭರ್ತಿಯಾಗಿಲ್ಲ’ ಎಂದು ಪ್ರವಾಸೋದ್ಯಮ ಉದ್ಯಮ ಪಾಲುದಾರರ ಸಂಘದ ಅಧ್ಯಕ್ಷ ಮೊಹಿಂದರ್ ಸೇಥ್ ಹೇಳುತ್ತಾರೆ.</p>.<p class="title">‘ಆರ್ಟಿಪಿಸಿಆರ್ ವರದಿ ಮತ್ತು ಕೋವಿಡ್ ಪಾಸ್ಗಳಂಥ ಕಂಡೀಷನ್ಗಳನ್ನು ಸರ್ಕಾರವು ಹಿಂತೆಗೆದುಕೊಂಡಿರುವುದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತಾಗಿದೆ’ ಎಂದು ಶಿಮ್ಲಾ ಹೋಟೆಲ್ ಮತ್ತು ರೆಸ್ಟೊರೆಂಟ್ ಅಸೋಯೇಷನ್ ಅಧ್ಯಕ್ಷ ಸಂಜಯ್ ಸೂದ್ ಅವರು ತಿಳಿಸಿದ್ದಾರೆ.</p>.<p class="title">ಆದಾಗ್ಯೂ, ಪ್ರವಾಸಿಗರ ಸಂಖ್ಯೆಯಲ್ಲಿನ ಹೆಚ್ಚಳವು ಕೋವಿಡ್ ಮೂರನೇ ಅಲೆ ಭೀತಿಯನ್ನುಂಟು ಮಾಡಿದೆ. ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದಾರೆ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಕ್ಕೆ ಸವಾಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಶಿಮ್ಲಾ: </strong>ಹಲವು ರಾಜ್ಯಗಳಲ್ಲಿ ಬಿಸಿಗಾಳಿ ಅಪ್ಪಳಿಸುತ್ತಿದ್ದು, ದೇಶದಲ್ಲಿ ಕೋವಿಡ್ ಎರಡನೇ ಅಲೆಯ ತೀವ್ರತೆಯು ಕಡಿಮೆಯಾಗುತ್ತಿರುವುದರಿಂದ ಹಿಮಾಚಲ ಪ್ರದೇಶದತ್ತ ಪ್ರವಾಸಿಗರ ಚಿತ್ತ ಹರಿದಿದೆ.</p>.<p class="title">ಬಿಸಿಗಾಳಿ ಹೆಚ್ಚಾಗಿರುವ ರಾಜ್ಯಗಳಿಂದ ಜನರು ಪ್ರವಾಸಿಗರ ನೆಚ್ಚಿನ ತಾಣಗಳಾದ ಶಿಮ್ಲಾ, ಕುಫ್ರಿ, ನರ್ಕಂದ, ಡಾಲ್ ಹೌಸಿ, ಮನಾಲಿ, ಲಾಹೌಲ್ ಸೇರಿದಂತೆ ಇತರ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.</p>.<p class="title">ಕೋವಿಡ್ 2ನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದನ್ನು ಮನಗಂಡು ಪ್ರವಾಸೋದ್ಯಮದ ಚೇತರಿಕೆಗಾಗಿ ಅಲ್ಲಿನ ಸರ್ಕಾರ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಿದೆ. ಹಾಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ವಾರಾಂತ್ಯದ ದಿನಗಳಲ್ಲಿ ಇಲ್ಲಿನ ಹೋಟೆಲ್ಗಳಲ್ಲಿ ಉಳಿಯುತ್ತಿದ್ದಾರೆ.</p>.<p class="title">‘ಕಳೆದ ಕೆಲವು ದಿನಗಳಿಂದ ಹೋಟೆಲ್ಗಳಲ್ಲಿ ಉಳಿಯುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಪೂರ್ಣಪ್ರಮಾಣದಲ್ಲಿ ಇನ್ನೂ ಹೋಟೆಲ್ಗಳು ಭರ್ತಿಯಾಗಿಲ್ಲ’ ಎಂದು ಪ್ರವಾಸೋದ್ಯಮ ಉದ್ಯಮ ಪಾಲುದಾರರ ಸಂಘದ ಅಧ್ಯಕ್ಷ ಮೊಹಿಂದರ್ ಸೇಥ್ ಹೇಳುತ್ತಾರೆ.</p>.<p class="title">‘ಆರ್ಟಿಪಿಸಿಆರ್ ವರದಿ ಮತ್ತು ಕೋವಿಡ್ ಪಾಸ್ಗಳಂಥ ಕಂಡೀಷನ್ಗಳನ್ನು ಸರ್ಕಾರವು ಹಿಂತೆಗೆದುಕೊಂಡಿರುವುದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತಾಗಿದೆ’ ಎಂದು ಶಿಮ್ಲಾ ಹೋಟೆಲ್ ಮತ್ತು ರೆಸ್ಟೊರೆಂಟ್ ಅಸೋಯೇಷನ್ ಅಧ್ಯಕ್ಷ ಸಂಜಯ್ ಸೂದ್ ಅವರು ತಿಳಿಸಿದ್ದಾರೆ.</p>.<p class="title">ಆದಾಗ್ಯೂ, ಪ್ರವಾಸಿಗರ ಸಂಖ್ಯೆಯಲ್ಲಿನ ಹೆಚ್ಚಳವು ಕೋವಿಡ್ ಮೂರನೇ ಅಲೆ ಭೀತಿಯನ್ನುಂಟು ಮಾಡಿದೆ. ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದಾರೆ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಕ್ಕೆ ಸವಾಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>