ನವದೆಹಲಿ: ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ಸಮೀಪ ಪಂಜಾಬ್ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಟ್ರ್ಯಾಕ್ಟರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕೃಷಿ ಮಸೂದೆಗೆ ಹಲವು ಸಂಘಟನೆಗಳು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. 'ಸುಮಾರು 15–20 ಜನರು ಬೆಳಿಗ್ಗೆ 7:15–7:30ರ ಸುಮಾರಿಗೆ ಇಂಡಿಯಾ ಗೇಟ್ ಬಳಿ ಸೇರಿ ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿದ್ದಾರೆ' ಎಂದು ಪೊಲೀಸರು ಹೇಳಿದ್ದಾರೆ.
ಬೆಂಕಿ ನಂದಿಸಲಾಗಿದ್ದು, ಪ್ರತಿಭಟನೆ ವೇಳೆ ಬೆಂಕಿ ಹೊತ್ತಿಸಿದವರನ್ನು ಗುರುತಿಸಲಾಗುತ್ತಿದೆ ಎಂದಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೃಷಿ ಮಸೂದೆಗಳನ್ನು ವಿರೋಧಿಸಿ ಸೋಮವಾರ ಷಹೀದ್ ಭಗತ್ ಸಿಂಗ್ ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
#WATCH: Punjab Youth Congress workers stage a protest against the farm laws near India Gate in Delhi. A tractor was also set ablaze. pic.twitter.com/iA5z6WLGXR
ಕಳೆದ ಭಾನುವಾರ ಸಂಸತ್ತಿನಲ್ಲಿ ಮೂರು ಕೃಷಿ ಮಸೂದೆಗಳಿಗೆ ಅನುಮೋದನೆ ಪಡೆಯಲಾಗಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದಲೂ ಮಸೂದೆಗಳಿಗೆ ಸಮ್ಮತಿ ದೊರೆತಿದೆ. ಇದರ ಬೆನ್ನಲ್ಲೇ ಹರಿಯಾಣ ಮತ್ತು ಪಂಜಾಬ್ನಲ್ಲಿ ಹೆಚ್ಚಿನ ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
#WATCH: A tractor was set ablaze by unidentified persons near India Gate, today. DCP New Delhi says,"Around 15- 20 persons gathered here & tried to set a tractor on fire. The fire has been doused off & tractor was also removed. Those involved are being identified. Probe underway" pic.twitter.com/IKlOxq4mbj